ಗುರುವಾರ ರಾತ್ರಿ ವಿಧಾನಸಭೆಗೆ ಹಾಸಿಗೆಗಳನ್ನು ತರಿಸಿಕೊಂಡ ಕಾಂಗ್ರೆಸ್​ ನಾಯಕರು!

ಬೆಂಗಳೂರು: ರಾಷ್ಟ್ರಧ್ವಜ ಕುರಿತು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್​.ಈಶ್ವರಪ್ಪ ಅವರನ್ನ ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್​ ಶಾಸಕರು ವಿಧಾನಸೌಧದಲ್ಲಿ ಗುರುವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.ಗುರುವಾರ ರಾತ್ರಿ ವಿಧಾನಸಭೆಗೆ ಹಾಸಿಗೆಗಳನ್ನು ತರಿಸಿಕೊಂಡ ಕಾಂಗ್ರೆಸ್​ ನಾಯಕರು ಅಲ್ಲೇ ಮಲಗಿ ಅಹೋರಾತ್ರಿ ಧರಣಿ ನಡೆಸಿದರು.ಶುಕ್ರವಾರ ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕರು ವಿಧಾನಸೌಧದ ಆವರಣದಲ್ಲಿ ವಾಕಿಂಗ್ ಮಾಡಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕುಳಿತು ದಿನಪತ್ರಿಕೆಗಳನ್ನು ದಿನಪತ್ರಿಕೆಗಳನ್ನು ಓದಿದರು.ಈಶ್ವರಪ್ಪರ ರಾಜೀನಾಮೆಯನ್ನ ನಾವು ಕೇಳ್ತಿಲ್ಲ. ರಾಷ್ಟ್ರದ್ರೋಹದ ಹೇಳಿಕೆ ನೀಡಿದ ಈಶ್ವರಪ್ಪರನ್ನು ಸಿಎಂ ಬೊಮ್ಮಾಯಿ ಅಥವಾ ಸ್ಪೀಕರ್ ಅವರೇ ವಜಾ ಮಾಡಬೇಕು. ಅಲ್ಲಿಯವರೆಗೂ ಹೋರಾಟ ನಿಲ್ಲಲ್ಲ ಎಂದು ಕಾಂಗ್ರೆಸ್​ ಎಚ್ಚರಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚರ್ಚೆಯ ಬಳಿಕ 7ನೇ ವೇತನ ಆಯೋಗ ಕುರಿತು ನಿರ್ಧಾರಿಸಿದ : ಸಿಎಂ ಬೊಮ್ಮಾಯಿ ;

Fri Feb 18 , 2022
  ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಿಸಲು 2022-23ನೇ ಸಾಲಿನಲ್ಲಿ 7ನೇ ವೇತನ ಆಯೋಗ ರಚಿಸುವ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ. ಪ್ರಶ್ನೋತ್ತರ ವೇಳೆ ಜೆಡಿಎಸ್’ನ ಕೆ.ಟಿ.ಶ್ರೀಕಂಠೇಗೌಡ, ದೇವೇಗೌಡ, ಬಿಜೆಪಿಯ ಅರುಣ್ ಶಹಾಪೂರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 2022-23ರಲ್ಲಿ ಆಯೋಗ ರಚನೆ ಮಾಡುವ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ರಾಜ್ಯ ಸರ್ಕಾರ […]

Advertisement

Wordpress Social Share Plugin powered by Ultimatelysocial