2023 ರ ವಿಧಾನ ಸಭಾ ಚುನಾವಣಾ ದಿನಗಳು ಹತ್ತಿರವಾಗುತ್ತಿದೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಬಹಳ ಜೋರಾಗಿಯೇ ನಡೆಯುತ್ತಿದೆ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಸತತ 35 ವರ್ಷಗಳಿಂದ ಈ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷಗಳಿಗಿಂತ ವ್ಯಕ್ತಿಗಳಿಗೆ ಹೆಚ್ಚು ಮನ್ನಣೆ ನೀಡುತ್ತಾರೆ ಒಮ್ಮೆ ಹಾಲಿ ಶಾಸಕ ರಮೇಶ್ ಕುಮಾರ್ ಹಾಗೂ ಇನ್ನೊಮ್ಮೆ ಮಾಜಿ ಶಾಸಕ ಜಿ ಕೆ ವೆಂಕಟಶಿವಾರೆಡ್ಡಿ ಗೆಲ್ಲುತ್ತಾ ಬಂದಿದ್ದಾರೆ ಆದರೆ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಶಾಸಕ ಕೆ ಆರ್ ರಮೇಶ್ ಕುಮಾರ್ ಆಯ್ಕೆಯಾಗಿದ್ದು ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಹಾಲಿ ಹಾಗೂ ಮಾಜಿ ಶಾಸಕರುಗಳು ಇಬ್ಬರೂ ಮುಂದಿನ ಚುನಾವಣೆಯಲ್ಲಿ ಗೆಲ್ಲಲೇ ಬೇಕೆಂಬ ಛಲದಿಂದ ಹಲವು ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದ್ದು ಇಂದು ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದ ದಿಗವಚಿಂತಪಲ್ಲಿ ಗ್ರಾಮದಲ್ಲಿ 12 ಕುಟುಂಬಗಳು ಕಾಂಗ್ರೇಸ್ ಪಕ್ಷವನ್ನು ತೊರೆದು ಕೋಲಾರ ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷರು ಹಾಗೂ ತಾಲ್ಲೂಕಿನ ಮಾಜಿ ಶಾಸಕರಾದ ಜಿ ಕೆ ವೆಂಕಟಶಿವಾರೆಡ್ಡಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ನಂತರ ಮಾತನಾಡಿದ ಜಿ ಕೆ ವೆಂಕಟಶಿವಾರೆಡ್ಡಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ ಎಲ್ಲರಿಗೂ ಒಳ್ಳೆ ದಿನಗಳು ಬರುತ್ತವೆ ಮುಖ್ಯಮಂತ್ರಿಗಳಾದ 24 ಗಂಟೆ ಒಳಗಾಗಿ ಶ್ರೀ ಶಕ್ತಿ ಸಂಘಗಳ ಸಂಪೂರ್ಣ ಮನ್ನಾ ಮಾಡುತ್ತಾರೆಂದು ನೆರೆದಿದ್ದ ಜನರಿಗೆ ಭರವಸೆ ಕೊಟ್ಟು ಪಕ್ಷಕ್ಕೆ ಸೇರ್ಪಡೆಯಾದಂತಹ ಎಲ್ಲಾ ಕುಟುಂಬಗಳಿಗೂ ಸಹ ಶುಭ ಹಾರೈಸಿದರು.
2023 ರ ವಿಧಾನ ಸಭಾ ಚುನಾವಣಾ ದಿನಗಳು ಹತ್ತಿರವಾಗುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
Please follow and like us: