ಬೆಂಗಳೂರು : ನಾಮಪತ್ರ ವಾಪಾಸ್ ಪಡೆಯುವುದಕ್ಕೆ ಕೊನೆಯ ದಿನವಾದ ಶುಕ್ರವಾರ ಕಾಂಗ್ರೆಸ್ ಇಟ್ಟ ಹೆಜ್ಜೆ ಹಿಂಪಡೆಯದೇ ಇರುವುದರಿಂದ ರಾಜ್ಯಸಭಾ ಚುನಾವಣೆಗೆ ಈಗ ಮತದಾನ ಅನಿವಾರ್ಯವಾಗಿದೆ.ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್ ಸಿಂಗ್, ಕಾಂಗ್ರೆಸ್ ನ ಜೈರಾಂ ರಮೇಶ್, ಮನ್ಸೂರ್ ಅಲಿಖಾನ್ ಹಾಗೂ ಜೆಡಿಎಸ್ ನ ಕುಪ್ಪೇಂದ್ರ ರೆಡ್ಡಿ ಈಗ ಕಣದಲ್ಲಿ ಇದ್ದಾರೆ.
ಜೆಡಿಎಸ್ ಗೆ ಚೆಕ್ ಮೇಟ್ ಕೊಡುವುದಕ್ಕಾಗಿಯೇ ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ಅವರನ್ನು ಕಣಕ್ಕೆ ಇಳಿಸಿದೆ. ಎಷ್ಟೇ ಒತ್ತಡ ಬಂದರೂ ನಾಮಪತ್ರ ವಾಪಾಸ್ ತೆಗೆಯದೇ ಇರುವ ಮೂಲಕ ಜೆಡಿಎಸ್ ಗೆ ದೊಡ್ಡ ಪಾಠ ಕಲಿಸಲು ಕಾಂಗ್ರೆಸ್ ಮುಂದಾಗಿದೆ. ಎರಡನೇ ಅಭ್ಯರ್ಥಿಗೆ ಸೋಲು ಪಕ್ಕಾ ಎಂಬುದು ಗೊತ್ತಿದ್ದರೂ ಜೆಡಿಎಸ್ ಸೋಲಿಸಬೇಕೆಂಬುದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹಠವಾಗಿದ್ದು, ಜೂನ್ 10 ರಂದು ಎಲ್ಲ ಕಾಂಗ್ರೆಸ್ ಶಾಸಕರು ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೇ ಮತ ಹಾಕಬೇಕೆಂದು ವಿಪ್ ಜಾರಿಗೊಳಿಸಿದೆ.
ಒಳ ಒಪ್ಪಂದ
ಕಾಂಗ್ರೆಸ್ ನ ಈ ನಡೆಯನ್ನು ಜೆಡಿಎಸ್ ಬಲವಾಗಿ ಟೀಕಿಸಿದೆ. ಲೆಹರ್ ಸಿಂಗ್ ಅವರನ್ನು ಗೆಲ್ಲಿಸಲು ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಟೀಕಿಸಿದ್ದಾರೆ.
ಚುನಾವಣಾಧಿಕಾರಿ ಎಂ.ಕೆ. ವಿಶಾಲಕ್ಷಿ ಹೇಳಿಕೆ ನೀಡಿದ್ದು,ರಾಜ್ಯಸಭಾ ಚುನಾವಣೆಗೆ ಆರು ನಾಮಪತ್ರ ಸಲ್ಲಿಕೆ ಆಗಿವೆ. ನಾಮಪತ್ರ ಹಿಂಪಡೆಯುವುದಕ್ಕೆ ಇಂದು ಕೂನೆ ದಿನ ಆಗಿತ್ತು. ಆದರೆ ಇಲ್ಲಿಯವರೆಗೆ ಯಾರೂ ವಾಪಸ್ ನಾಮಪತ್ರ ವಾಪಸ್ ಪಡೆದಿಲ್ಲ, ಆದ್ದರಿಂದ 10 ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ. ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಚುನಾವಣೆ ನಡೆಯಲಿದೆ. 5 ಗಂಟೆಗೆ ಮತದಾನ ಆಗಿ ಆಯ್ಕೆ ಘೋಷಣೆ ಮಾಡಲಾಗುತ್ತದೆ ಎಂದರು.
ಪ್ರತಿ ಒಂದು ಸ್ಥಾನಕ್ಕೆ 45 ಮತ ಬೇಕು. ನಾಲ್ಕನೇ ಸ್ಥಾನಕ್ಕೆ ಎರಡನೇ ಪ್ರಶಾಸ್ತ್ಯ ಮತ ಯಾರು ಹೆಚ್ಚು ತೆಗೆದುಕೊಳ್ಳುತ್ತಾರೆ, ಕೂನೆಗೆ ಯಾರು 45 ಸ್ಥಾನ ಗಳಿಸದಿದ್ದರೂ, ಯಾರು ಹೆಚ್ಚು ಮತಗಳನ್ನ ಗಳಿಸುತ್ತಾರೆ ಅವರನ್ನು ನಾಲ್ಕನೇ ಆಯ್ಕೆ ಆಗಿ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada