KING KHAN:ವಿದೇಶದಲ್ಲಿ ಸಮಸ್ಯೆ ಬಂದಾಗ ‘ಶಾರೂಖ್ ಖಾನ್’ ಫ್ಯಾನ್ ಎಂದು ಹೇಳಿ;

ನವದೆಹಲಿ: ಭಾರತದ ಖ್ಯಾತ ನಟ, ಬಾಲಿವುಡ್‌ನ ಕಿಂಗ್ ಖಾನ್ ಬಾದ್ ಷಾ ಶಾರುಖ್ ಖಾನ್ ಯಾರಿಗೆ ತಾನೇ ಗೊತ್ತಿಲ್ಲ. ಪ್ರಪಂಚದ ಯಾವುದೇ ಮೂಲೆಗೆ ಹೋದರೂ ಬಹುತೇಕ ಅವರ ಅಭಿಮಾನಿಗಳನ್ನು ಖಂಡಿತವಾಗಿ ಕಾಣಬಹುದು.

ಆದರೆ ಅವರ ಫ್ಯಾನ್ ಫಾಲೋಯಿಂಗ್ ಹೇಗಿದೆಯೆಂದರೆ ಅನೇಕರ ಕೆಲಸಗಳು ವಿದೇಶದಲ್ಲೂ ಬಹಳ ಸುಲಭವಾಗಿ ನಡೆಯುತ್ತದೆ.

ವಾಸ್ತವವಾಗಿ, ಇತ್ತೀಚಿನ ದಿನಗಳಲ್ಲಿ ಒಂದು ಟ್ವೀಟ್ ಸದ್ದು ಮಾಡುತ್ತಿದೆ. ಇಂತಹದೊಂದು ಕಾರಣ ಈ ಟ್ವೀಟ್ ಹಿಂದೆ ಅಡಗಿದೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ಟ್ವೀಟ್‌ನಲ್ಲಿ, ಶಾರುಖ್ ಅಭಿಮಾನಿಯೊಬ್ಬರು ಹಿಂಜರಿಕೆಯಿಲ್ಲದೆ ವಿದೇಶದಲ್ಲಿ ಹೇಗೆ ಸಹಾಯ ಮಾಡಿದರು ಎಂದು ಮಹಿಳೆಯೊಬ್ಬರು ಹೇಳಿದ್ದಾರೆ.

ಹರಿಯಾಣದ ಅಶೋಕ ಯೂನಿವರ್ಸಿಟಿಯ ಅರ್ಥಶಾಸ್ತ್ರದ ಪ್ರೊಫೆಸರ್​ ಅಶ್ವಿನಿ ದೇಶಪಾಂಡೆ ಅವರು ಇತ್ತೀಚೆಗೆ ಈಜಿಪ್ಟ್​ಗೆ ತೆರಳಿದ್ದರು. ಆಗ ಅವರಿಗೆ ಒಂದು ಅನಿವಾರ್ಯ ಪರಿಸ್ಥಿತಿ ಎದುರಾಗಿತ್ತು. ಆಗ ಆ ವಿದೇಶಿ ನೆಲದಲ್ಲಿ ಅವರ ಸಹಾಯಕ್ಕೆ ಬಂದಿದ್ದು ಒಬ್ಬ ಶಾರುಖ್​ ಅಭಿಮಾನಿ! ಅದನ್ನು ಅಶ್ವಿನಿ ದೇಶಪಾಂಡೆ ಅವರು ಎಳೆಎಳೆಯಾಗಿ ವಿವರಿಸಿದ್ದಾರೆ.

ಈಜಿಪ್ಟ್​ನಲ್ಲಿ ಒಬ್ಬ ಟ್ರಾವೆಲ್​ ಏಜೆಂಟ್​ಗೆ ಅಶ್ವಿನಿ ದೇಶಪಾಂಡೆ ಹಣ ವರ್ಗಾವಣೆ ಮಾಡಬೇಕಿತ್ತು. ಆದರೆ ಅದಕ್ಕೆ ಕೆಲವು ಸಮಸ್ಯೆಗಳು ಎದುರಾಗಿದ್ದವು. ಆದರೆ ಆ ಟ್ರಾವೆಲ್​ ಏಜೆಂಟ್​ ಕೂಡ ಶಾರುಖ್​ ಖಾನ್​ ಅಭಿಮಾನಿ ಆಗಿದ್ದರಿಂದ ಆತ ಸಹಾಯ ಮಾಡಿದ.

‘ನೀವು ಶಾರುಖ್​ ಖಾನ್​ ಅವರ ದೇಶದವರು. ಹಾಗಾಗಿ ನಿಮ್ಮನ್ನು ನಾನು ನಂಬುತ್ತೇನೆ. ಮೊದಲು ನಿಮಗೆ ಬುಕಿಂಗ್​ ಮಾಡುತ್ತೇನೆ. ನಂತರ ಯಾವಾಗ ಬೇಕಿದ್ದರೂ ನೀವು ಹಣ ನೀಡಿ. ಶಾರುಖ್​ ಖಾನ್​ ಮೇಲಿನ ಅಭಿಮಾನಕ್ಕಲ್ಲದೇ ಬೇರೆ ಯಾವ ಕಾರಣಕ್ಕೂ ನಾನು ಈ ಸಹಾಯ ಮಾಡುತ್ತಿರಲಿಲ್ಲ’ ಅಂತ ಆತ ಹೇಳಿದ ಎಂದು ಅಶ್ವಿನಿ ದೇಶಪಾಂಡೆ ಟ್ವೀಟ್​ ಮಾಡಿದ್ದಾರೆ.

ಅಶ್ವಿನಿ ಅವರ ಟ್ವೀಟ್​ ಕಂಡು ಶಾರುಖ್​ ಅಭಿಮಾನಿಗಳು ಖುಷಿ ಆಗಿದ್ದಾರೆ. ತಾವೂ ಸಹ ವಿದೇಶಕ್ಕೆ ಹೋದಾಗ ಇದೇ ರೀತಿಯ ಘಟನೆಗಳು ನಡೆದಿದ್ದವು ಎಂಬುದನ್ನು ಅವರೆಲ್ಲ ಕಮೆಂಟ್​ಗಳ ಮೂಲಕ ತಿಳಿಸಿದ್ದಾರೆ. ಒಟ್ಟಿನಲ್ಲಿ ವಿದೇಶದಲ್ಲಿ ಶಾರುಖ್​ ಹವಾ ಹೇಗಿದೆ ಎಂಬುದಕ್ಕೆ ಈ ಘಟನೆಗಳೇ ಸಾಕ್ಷಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ನಟ ಅವಿನಾಶ್ ಇನ್ನಿಲ್ಲ ಎಂದವರಿಗೆ ಎಚ್ಚರಿಗೆ ನೀಡಿದ ನಟ;

Wed Jan 5 , 2022
ಕನ್ನಡದ ಕಲಾವಿದ ಅವಿನಾಶ್ ಅವರಿಗೆ ಈಗ ಹೊಸದೊಂದು ತಲೆ ಬಿಸಿ ಶುರುವಾಗಿ ಬಿಟ್ಟಿದೆ. ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಇಲ್ಲ ಸಲ್ಲದ ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಕುರಿತು ನಟ ಅವಿನಾಶ್ ಮಾತನಾಡಿದ್ದಾರೆ. ಈ ವಿಚಾರದಲ್ಲಿ ಅವಿನಾಶ್ ಅವರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಇತ್ತೀಚೆಗೆ ನಟ ಅವಿನಾಶ್ ಇನ್ನಿಲ್ಲ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸುದ್ದಿ ನೋಡಿ ಹಲವರು ಗಾಬರಿ ಗೊಂಡಿದ್ದರು. ಬೇರೆಯವರು ಯಾಕೆ ಸ್ವತಃ […]

Advertisement

Wordpress Social Share Plugin powered by Ultimatelysocial