ಪುಷ್ಪ2 ಟೀಂ ಸೇರಿಕೊಂಡ ವಿಜಯ್ ಸೇತುಪತಿ; ಪುಷ್ಪರಾಜ್ ಮುಂದೆ ಅಬ್ಬರಿಸುತ್ತಾರಾ ಮಕ್ಕಳ್ ಸೆಲ್ವನ್?

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ: ದಿ ರೈಸ್’ ಸಿನಿಮಾ ಸೂಪರ್ ಹಿಟ್ ಆಗಿದ್ದು ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಲೆಕ್ಷನ್ ಮಾಡಿದೆ. ಪುಷ್ಪು ದಿ ರೈಸ್ ಸಿನಿಮಾ ನೋಡಿದವ್ರು ಪುಷ್ಪ 2 ನೋಡೋಕೆ ತುದಿಗಾಲಲ್ಲಿ ನಿಂತಿದ್ದಾರೆ.

ಈ ಮಧ್ಯೆ ಚಿತ್ರತಂಡ ಮತ್ತೊಂದು ಹೊಸ ಸುದ್ದಿಯೊಂದನ್ನ ನೀಡಿದೆ.

‘ಪುಷ್ಪ 2’ ಚಿತ್ರದ ಚಿತ್ರೀಕರಣ ಬಹುತೇಕ ಕಂಪ್ಲೀಟ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ‘ಪುಷ್ಪ’ ಸಿನಿಮಾದಲ್ಲಿ ಪ್ರತೀಯೊಂದು ಪಾತ್ರವು ಹೈಲೈಟ್ ಆಗಿತ್ತು. ನಾಯಕ, ನಾಯಕಿ ಜೊತೆಗೆ ವಿಲನ್‌ಗಳು ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದವು.

ಪುಷ್ಪ ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಮತ್ತೊಂದು ಯುದ್ಧದ ಆರಂಭವಗಾಗಿತ್ತು. ಕ್ಲೈ ಮ್ಯಾಕ್ಸ್‌ನಲ್ಲಿ ಚಿತ್ರದ ನಾಯಕ ನಟ ಕೂಡ ಇದನ್ನೇ ಹೇಳುತ್ತಾರೆ. ಇನ್ನು ಪುಷ್ಪ ರಾಜ್‌ ಶತ್ರುಗಳು ಎಲ್ಲರೂ ಭಾಗ ಒಂದರಲ್ಲಿ ಅಂತ್ಯಗೊಂಡಿಲ್ಲ. ಎಲ್ಲರೂ ಪುಷ್ಪ ರಾಜ್‌ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ. ಇವರು ಮಾತ್ರವೇ ಅಲ್ಲ, ಪುಷ್ಪ 2 ಸಿನಿಮಾದಲ್ಲಿ ಮತ್ತಷ್ಟು ಕಲಾವಿದರು ಖಳನಾಯಕರಾಗಿ ಅಬ್ಬರಿಸಲಿದ್ದಾರೆ. ಈ ಸಾಲಿಗೆ ಈಗ ವಿಯಜ್ ಸೇತುಪತಿ ಸೇರಿದ್ದಾರೆ ಎನ್ನಲಾಗುತ್ತಿದೆ.

ಪುಷ್ಪ 2 ಚಿತ್ರದಲ್ಲಿ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ನಟಿಸುತ್ತಾರೆ ಎನ್ನುವ ಸುದ್ದಿ ಹೊರ ಬಿದ್ದಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ವಿಜಯ್ ಸೇತುಪತಿ ಕಾಣಿಸಿಕೊಳ್ಳಲಿದ್ದು, ಖಳನಾಯಕನಾಗಿ ಬಣ್ಣ ಹಚ್ಚುತ್ತಾರಾ ಅಥವಾ ಬೇರೆ ರೀತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ಬಗ್ಗೆ ಚಿತ್ರತಂಡ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದು ಸಂಜೆಯೇ ಮಹಾರಾಷ್ಟ್ರದ ನೂತನ ಸಿಎಂ ಆಗಿ ಫಡ್ನವಿಸ್​​ ಪದಗ್ರಹಣ

Thu Jun 30 , 2022
  ಶಿವಸೇನೆ ರೆಬೆಲ್​ ನಾಯಕ ಏಕನಾಥ್​​ ಶಿಂಧೆ ಬಣದ ಸಹಕಾರದೊಂದಿಗೆ ಮಹಾರಾಷ್ಟ್ರ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ. ಈಗಾಗಲೇ ಸರ್ಕಾರ ರಚನೆಗೆ ಅವಕಾಶ ನೀಡಿ ಎಂದು ಮಹಾರಾಷ್ಟ್ರ ರಾಜ್ಯಪಾಲರಿಗೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್​​​ ಮನವಿ ಮಾಡಿದ್ದಾರೆ. ಈಗ ರಾಜ್ಯಪಾಲರು ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿದ್ದು, ಮಹಾರಾಷ್ಟ್ರ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್​​ ಇಂದು ಸಂಜೆ 7 ಗಂಟೆಗೆ ಪದಗ್ರಹಣ ಮಾಡಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಬುಧವಾರ […]

Advertisement

Wordpress Social Share Plugin powered by Ultimatelysocial