ಹೆಸ್ಕಾಂ ಯಡವಟ್ಟಿನಿಂದ 4 ಏಕರೆ ಕಬ್ಬು ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ನಡೆದಿದೆ..ಶಾರ್ಟ್ ಸರ್ಕ್ಯೂಟ್ ರಾಮಣ್ಣ ಗುರಿಕಾರ ಎಂಬುವರಿಗೆ ಸೇರಿದ ಕಬ್ಬು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ…ಘಟನೆಗೆ ಸಂಭಂದಿಸಿ ಕೂಡಲೇ ಹೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದರು ಅಧಿಕಾರಿಗಳು ಸಾರಿಯಾಗಿ ಸ್ಪಂದಿಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ….ಇನ್ನು ಘಟನಾಸ್ಥಳಕ್ಕೆ ಅಗ್ನಿಶಾಮಕದಳ ದೌಡಾಯಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನವನ್ನು ಮಾಡಿದೆ.. ಹೆಸ್ಕಾಂ ನಿರ್ಲಕ್ಷ್ಯದಿಂದಲೇ ಕಬ್ಬಿಗೆ ಬೆಂಕಿ ಬಿದ್ದಿದೆ ಎಂದು ಆರೋಪ ಮಾಡಿದ್ದು,ಘಟನಾಸ್ಥಳಕ್ಕೆ ಹೆಸ್ಕಾ ಅಧಿಕಾರಿಗಳು ಆಗಮಿಸುವಂತೆ ರೈತರು ಆಗ್ರಹಿಸಿದ್ದಾರೆ..
ಹೆಸ್ಕಾಂ ನಿರ್ಲಕ್ಷ್ಯ 4 ಎಕರೆ ಕಬ್ಬು ಬೆಂಕಿಗೆ ಆಹುತಿ..!
Please follow and like us: