ವಿಜಯನಗರ: ಕ್ರೀಡಾಂಗಣ, ವೃತ್ತಕ್ಕೆ ಪುನೀತ್‌ ರಾಜಕುಮಾರ್‌ ಹೆಸರು

 

ಹೊಸಪೇಟೆ: ನಗರದ ತಹಶೀಲ್ದಾರ್‌ ಕಚೇರಿ ಬಳಿಯಿರುವ ನಾಲ್ಕು ಕೂಡು ರಸ್ತೆಯ ವೃತ್ತ ಹಾಗೂ ಜಿಲ್ಲಾ ಕ್ರೀಡಾಂಗಣಕ್ಕೆ ದಿವಂಗತ ನಟ ಪುನೀತ್‌ ರಾಜಕುಮಾರ್‌ ಅವರ ಹೆಸರು ನಾಮಕರಣ ಮಾಡುವುದಕ್ಕೆ ಬುಧವಾರ ನಡೆದ ನಗರಸಭೆಯ ಸಾಮಾನ್ಯ ಸಭೆ ಸರ್ವಾನುಮತದ ಒಪ್ಪಿಗೆ ನೀಡಿದೆ.ಚುನಾವಣೆ ನಂತರ ಹೊಸದಾಗಿ ಅಸ್ತಿತ್ವಕ್ಕೆ ಬಂದ ನಂತರ ನಡೆದ ನಗರಸಭೆಯ ಮೊದಲ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿಗಳಿಗೆ ನಾಮನಿರ್ದೇಶನ ಮಾಡಲಾಯಿತು. ಬಳಿಕ ವೃತ್ತ ಹಾಗೂ ಕ್ರೀಡಾಂಗಣಕ್ಕೆ ಪುನೀತ್‌ ರಾಜಕುಮಾರ್‌ ಹೆಸರಿಡುವಂತೆ ಅಖಿಲ ಕರ್ನಾಟಕ ಡಾ. ರಾಜವಂಶ ಕನ್ನಡ ಯುವಸೇನೆ ಸಲ್ಲಿಸಿದ್ದ ಮನವಿ ವಿಷಯವನ್ನು ಕೈಗೆತ್ತಿಕೊಳ್ಳಲಾಯಿತು. ಎಲ್ಲ ಸದಸ್ಯರು ಎರಡಕ್ಕೂ ಸಮ್ಮತಿ ಸೂಚಿಸಿದರು. ಸಾರ್ವಜನಿಕರ ಆಕ್ಷೇಪಣೆ/ಅಭಿಪ್ರಾಯ ಪಡೆದ ನಂತರ ಎರಡಕ್ಕೂ ಪುನೀತ್‌ ಹೆಸರು ಅಧಿಕೃತವಾಗಿ ನಾಮಕರಣವಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೆರಿಗೆ ವೇಳೆ ಮಹಿಳೆ ಸಾವು, ಆಸ್ಪತ್ರೆಗೆ ಬೀಗ ಹಾಕಿ ವೈದ್ಯರು ಓಡಿ ಹೋಗಿದ್ದಾರೆ

Wed Feb 9 , 2022
  ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ಬಂದಿದ್ದ 25ರ ಹರೆಯದ ಮಹಿಳೆ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಇದು ವಿವಾದಕ್ಕೆ ಕಾರಣವಾಗಲಿದೆ ಎಂದು ಹೆದರಿದ ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಗೆ ಬೀಗ ಜಡಿದು ಪರಾರಿಯಾಗಿದ್ದಾರೆ. ಈ ಘಟನೆ ಸಂಚಲನ ಮೂಡಿಸಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಆಸ್ಪತ್ರೆಯ ಬೀಗ ಒಡೆದು ಆಸ್ಪತ್ರೆಗೆ ದಾಖಲಾಗಿದ್ದ ಇತರ ರೋಗಿಗಳನ್ನು ಚಿಕಿತ್ಸೆಗಾಗಿ ಸ್ಥಳಾಂತರಿಸಿದ್ದಾರೆ. ಅಲ್ಲದೇ […]

Advertisement

Wordpress Social Share Plugin powered by Ultimatelysocial