ಹೊಸಪೇಟೆ: ನಗರದ ತಹಶೀಲ್ದಾರ್ ಕಚೇರಿ ಬಳಿಯಿರುವ ನಾಲ್ಕು ಕೂಡು ರಸ್ತೆಯ ವೃತ್ತ ಹಾಗೂ ಜಿಲ್ಲಾ ಕ್ರೀಡಾಂಗಣಕ್ಕೆ ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಹೆಸರು ನಾಮಕರಣ ಮಾಡುವುದಕ್ಕೆ ಬುಧವಾರ ನಡೆದ ನಗರಸಭೆಯ ಸಾಮಾನ್ಯ ಸಭೆ ಸರ್ವಾನುಮತದ ಒಪ್ಪಿಗೆ ನೀಡಿದೆ.ಚುನಾವಣೆ ನಂತರ ಹೊಸದಾಗಿ ಅಸ್ತಿತ್ವಕ್ಕೆ ಬಂದ ನಂತರ ನಡೆದ ನಗರಸಭೆಯ ಮೊದಲ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿಗಳಿಗೆ ನಾಮನಿರ್ದೇಶನ ಮಾಡಲಾಯಿತು. ಬಳಿಕ ವೃತ್ತ ಹಾಗೂ ಕ್ರೀಡಾಂಗಣಕ್ಕೆ ಪುನೀತ್ ರಾಜಕುಮಾರ್ ಹೆಸರಿಡುವಂತೆ ಅಖಿಲ ಕರ್ನಾಟಕ ಡಾ. ರಾಜವಂಶ ಕನ್ನಡ ಯುವಸೇನೆ ಸಲ್ಲಿಸಿದ್ದ ಮನವಿ ವಿಷಯವನ್ನು ಕೈಗೆತ್ತಿಕೊಳ್ಳಲಾಯಿತು. ಎಲ್ಲ ಸದಸ್ಯರು ಎರಡಕ್ಕೂ ಸಮ್ಮತಿ ಸೂಚಿಸಿದರು. ಸಾರ್ವಜನಿಕರ ಆಕ್ಷೇಪಣೆ/ಅಭಿಪ್ರಾಯ ಪಡೆದ ನಂತರ ಎರಡಕ್ಕೂ ಪುನೀತ್ ಹೆಸರು ಅಧಿಕೃತವಾಗಿ ನಾಮಕರಣವಾಗಲಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada