“ವಿಕ್ರಾಂತ್‌ ರೋಣ’ ಚಿತ್ರದ ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಕಿಚ್ಚ ಸುದೀಪ್‌ ನಟನೆಯ “ವಿಕ್ರಾಂತ್‌ ರೋಣ’ ಚಿತ್ರದ ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ ಹಾಗೂ “ರಕ್ಕಮ್ಮ’ ಹಾಡು ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ಈಗ ಚಿತ್ರದಿಂದ ಮತ್ತೂಂದು ಹಾಡು ಬಿಡುಗಡೆಯಾಗಿದೆ.

ಅದು ಪುಟ್ಟ ಮಗು ಹಾಗೂ ಸುದೀಪ್‌ ಅವರ ನಡುವಿನ ಸಾಂಗ್‌.

ಮಗುವೊಂದನ್ನು ಮಲಗಿಸಲು ಲಾಲಿ ಹಾಡುವ ಹಾಡು ಇದಾಗಿದ್ದು, ವಿಜಯ್‌ ಪ್ರಕಾಶ್‌ ಕಂಠಸಿರಿಯಲ್ಲಿ ಮೂಡಿಬಂದಿದೆ. ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.

ನಿರ್ದೇಶಕ ಅನೂಪ್‌ ಭಂಡಾರಿ ಪ್ರಕಾರ, ” ವಿಕ್ರಾಂತ್‌ ರೋಣ’ದಲ್ಲಿ ನಟ ಸುದೀಪ್‌ ಅವರ ಸ್ಟಾರ್‌ಡಮ್‌ ಮತ್ತು ಅವರ ಪರ್ಫಾರ್ಮೆನ್ಸ್‌ ಎರಡರ ಸಮಾಗಮವಾಗಿದೆಯಂತೆ. “ಸುದೀಪ್‌ ಅವರಿಗೆ ದೇಶದಾದ್ಯಂತ ಅವರದ್ದೇ ಆದ ಫ್ಯಾನ್ಸ್‌ ಬಳಗವಿದೆ. ಇಲ್ಲಿಯವರೆಗೆ ಅವರು ಮಾಡಿರುವ ಸಿನಿಮಾಗಳಲ್ಲಿ ತಮ್ಮ ಪರ್ಫಾರ್ಮೆನ್ಸ್‌ ಏನು ಅನ್ನೋದನ್ನ ತೋರಿಸಿದ್ದಾರೆ. ಅವರಿಗೆ ಅವರದ್ದೇ ಆದ ಸ್ಟಾರ್‌ಡಮ್‌ ಇದೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು “ವಿಕ್ರಾಂತ್‌ ರೋಣ’ ಸಿನಿಮಾ ಮಾಡಿದ್ದೇವೆ. ಇದರಲ್ಲಿ ಅವರ ಸ್ಟಾರ್‌ಡಮ್‌ ಮತ್ತು ಪರ್ಫಾರ್ಮೆನ್ಸ್‌ ಎರಡಕ್ಕೂ ಸಾಕಷ್ಟು ಸ್ಪೇಸ್‌ ಇದೆ’ ಎನ್ನುವುದು ಅನೂಪ್‌ ಮಾತು.

“ಈ ಸಿನಿಮಾದ ಸಬ್ಜೆಕ್ಟ್ ಮತ್ತು ಸ್ಕ್ರಿಪ್ಟ್ ಎರಡೂ ಕೂಡ ಸುದೀಪ್‌ ಅವರಿಗಾಗಿಯೇ ಹೇಳಿ ಮಾಡಿಸಿದಂತೆ, ಸಹಜವಾಗಿ ಮೂಡಿಬಂದಿದೆ. ಸುದೀಪ್‌ ಅವರನ್ನು ಹೊರತುಪಡಿಸಿ ಬೇರೆ ಯಾರಿಗೂ ಮಾಡಲಾಗದು ಎನ್ನುವಷ್ಟರ ಮಟ್ಟಿಗೆ ಈ ಸಬ್ಜೆಕ್ಟ್ ಅವರಿಗೆ ಮ್ಯಾಚ್‌ ಆಗುತ್ತದೆ. ಸಿನಿಮಾದಲ್ಲಿ ಯಾವುದನ್ನೂ ಅತಿಯಾಗಿ ಸೇರಿಸಲು ಹೋಗಿಲ್ಲ. ಎಲ್ಲವೂ ಆರ್ಗಾನಿಕ್‌ ಆಗಿದೆ’ ಎನ್ನುತ್ತಾರೆ ಅನೂಪ್‌.

ಇನ್ನು, ಈ ಚಿತ್ರಕ್ಕೆ ಶಾಲಿನಿ ಜಾಕ್‌ ಮಂಜು ಹಾಗೂ ಅಲಂಕಾರ್‌ ಪಾಂಡಿಯನ್‌ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ನಿರೂಪ್‌ ಭಂಡಾರಿ, ನೀತಾ ಅಶೋಕ್‌, ರವಿಶಂಕರ್‌ ಗೌಡ, ಮಧುಸೂಧನ್‌ ರಾವ್‌ ಎಂಬ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ. ಅನೂಪ್‌ ಭಂಡಾರಿ ನಿರ್ದೇಶನ, ಬಿ. ಅಜನೀಶ್‌ ಲೋಕ್‌ನಾಥ್‌ ಸಂಗೀತ ಸಂಯೋಜನೆ, ವಿಲಿಯಂ ಡೇವಿಡ್‌ ಛಾಯಾಗ್ರಹಣ, ಆಶಿಕ್‌ ಕುಸುಗೊಳ್ಳಿ ಸಂಕಲನ ಚಿತ್ರಕ್ಕಿದೆ. ಚಿತ್ರ ಜು.28ರಂದು ತೆರೆಕಾಣುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಲ್‌ಇಟಿ ಭಯೋತ್ಪಾದಕ ತಾಲಿಬ್ ಹುಸೇನ್ ಬಿಜೆಪಿ ಸದಸ್ಯನೇ?

Mon Jul 4 , 2022
ಸ್ಥಳೀಯರಿಂದ ಹತ್ತಿಕ್ಕಲ್ಪಟ್ಟು ಪೊಲೀಸರಿಗೆ ಒಪ್ಪಿಸಲ್ಪಟ್ಟ ಇಬ್ಬರು ಮೋಸ್ಟ್-ವಾಂಟೆಡ್ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರಲ್ಲಿ ಒಬ್ಬರು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಐಟಿ ಸೆಲ್‌ನ ಉಸ್ತುವಾರಿ ವಹಿಸಿದ್ದರು ಎಂದು ವರದಿಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಈ ವರದಿಗೆ ಪ್ರತಿಕ್ರಿಯಿಸಿದ್ದಾರೆ. ಮೋಸ್ಟ್ ವಾಂಟೆಡ್ ಎಲ್‌ಇಟಿ ಭಯೋತ್ಪಾದಕ ತಾಲಿಬ್ ಹುಸೇನ್ “ಬಿಜೆಪಿಯ ಸಕ್ರಿಯ ಸದಸ್ಯ ಅಥವಾ ಪ್ರಾಥಮಿಕ ಸದಸ್ಯನಲ್ಲ” ಎಂದು ರೈನಾ ಸ್ಪಷ್ಟನೆ ನೀಡಿದ್ದಾರೆ. ಎಎನ್‌ಐ ಜೊತೆ ಮಾತನಾಡಿದ […]

Advertisement

Wordpress Social Share Plugin powered by Ultimatelysocial