ಗದಗ ತಾಲೂಕಿನ ಆದರಹಳ್ಳಿ ಗ್ರಾಮದಿಂದ ದೇವಿಹಾಳ್ಳಿ ಗ್ರಾಮದವರೆಗೆ ಹೋಗುವ ರಸ್ತೆ ಡಾಂಬರೀಕರಣ ಸಂಪೂರ್ಣ ಕಿತ್ತು ಹೋಗಿದೆ. ಗ್ರಾಮದ ರಸ್ತೆ ಸಂಪೂರ್ಣ ಕಿತ್ತು ಹೋಗಿದ್ದು ರೈತರಿಗೆ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಇದಕ್ಕೆ ಕಲ್ಲಿನ ಕ್ವಾರಿಗಳು ಹಾಗೂ ಓವರಲೋಡ ತುಂಬಿ ರಸ್ತೆ ಎಲ್ಲಾ ಹಾಳು ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಸ್ತೆ ಅವ್ಯವಸ್ಥೆ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ವಹಿಸಿದ್ದಾರೆ. ತಕ್ಷಣ ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉತ್ತಮ ರಸ್ತೆ ನಿರ್ಮಿಸಬೇಕು. ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನು ಓದಿ:ಮೈಸೂರಿನಲ್ಲಿ ಹೆಚ್ ವಿಶ್ವನಾಥ್ ಕಿಡಿ