ವಿನಯ್ ರಾಜ್ ಕುಮಾರ್ ನಟನೆಯ ‘ಒಂದು ಸರಳ ಪ್ರೇಮಕಥೆ’ ಪೋಸ್ಟರ್ ರಿಲೀಸ್!

ಸಿಂಪಲ್ ಸುನಿ ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಒಂದು ಸರಳ ಪ್ರೇಮಕಥೆ’. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್, ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿದ್ದು, ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.

ನಟ ವಿನಯ್ ರಾಜ್ ಕುಮಾರ್ ಮಾತನಾಡಿ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ತುಂಬಾ ಇಷ್ಟ ಜೊತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡ ತುಂಬಾ ಇಷ್ಟ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡ್ತಿದ್ದೀನಿ ಅನ್ನೋದೇ ತುಂಬಾ ಖುಷಿ ಕೊಟ್ಟಿತ್ತು. ಈ ಚಿತ್ರದಲ್ಲಿ ಅತಿಶಯ್ ಪಾತ್ರದಲ್ಲಿ ನಟಿಸಿದ್ದೇನೆ. ಸಂಗೀತ ನಿರ್ದೇಶಕನ ಪಾತ್ರ. ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಆಗಬೇಕು ಅನ್ನೋದು ಅವನ ಕನಸು. ಆತನ ಮನಸ್ಸಲ್ಲಿ ಒಂದು ಹುಡುಗಿಯ ಹುಡುಕಾಟ ಯಾವಾಗಲೂ ಇರುತ್ತೆ ಇದು ಸಿನಿಮಾದ ಒಂದು ಎಳೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಗೆ ಇಟ್ಟ ಮೊದಲ ಟೈಟಲ್ ‘ಒಂದು ಸರಳ ಪ್ರೇಮಕಥೆ’. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್ ರಿನಿವಲ್ ಮಾಡಿಕೊಂಡು ಬಂದಿದ್ದೆ. ಈ ಚಿತ್ರದ ಕಥೆ ಕೇಳಿ ವಿನಯ್ ರಾಜ್ ಕುಮಾರ್ ಒಕೆ ಮಾಡಿದ್ರು, ಚಿತ್ರಕ್ಕೆ ಪ್ರಸನ್ನ ಅವರು ಕಥೆ ಬರೆದಿದ್ದಾರೆ. ಜನವರಿ 23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಮೈಸೂರಿನಲ್ಲಿ ಇವತ್ತು ಕೊನೆಯ ದಿನದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಕನ್ನಡ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು ಎಂದು ಮಲ್ಲಿಕಾ ಸಿಂಗ್ ಮೊದಲ ಕನ್ನಡ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು.

ಸಾಧುಕೋಕಿಲ, ರಾಜೇಶ್ ನಟರಂಗ, ಅರುಣ ಬಾಲರಾಜ್ ಒಳಗೊಂಡ ಕಲಾವಿದರು ಒಂದು ಸರಳ ಪ್ರೇಮಕಥೆ ಚಿತ್ರದಲ್ಲಿದ್ದು, ಕಾರ್ತಿಕ್ ಛಾಯಾಗ್ರಹಣ, ಆದಿ ಸಂಕಲನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʻಸುಮಲತಾ ಬಿಜೆಪಿ ಸೇರ್ಪಡೆʼಗೆ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್?‌

Thu Mar 9 , 2023
ಮಂಡ್ಯ: ಮುಂದಿನ ವಿಧಾನಸಭೆ ಚುನಾವಣೆ ರಣತಂತ್ರ ರೂಪಿಸುತ್ತಿರೋ ಬೆನ್ನಲ್ಲೆ ಸುಮಲತಾ ಅಂಬರೀಷ್‌  ಬಿಜೆಪಿ ಸೇರ್ಪಡೆ ಬಗ್ಗೆ ನಾಳೆ ಮಹತ್ವದ ತೀರ್ಮಾನವಾಗಲಿದೆ ಎಂದು ವರದಿಯಾಗಿದ್ದು, ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸುಮಲತಾ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್ ನೀಡುವ ಬಗ್ಗೆ ನಾಳೆ ಸುಮಲತಾ ನಿವಾಸದಲ್ಲೇ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಸುಮಲತಾ ಅಂಬರೀಷ್‌ ಮಹತ್ವದ ಘೋಷಣೆಯನ್ನು ಮಾಡಲಿದ್ದಾರೆ. ಸುಮಲತಾ ಅಂಬರೀಷ್‌ ಬಿಜೆಪಿ ಸೇರ್ಪಡೆ ಬಗ್ಗೆ ಆಪ್ತರೊಳಗಡೆ ಒಮ್ಮತ ತೀರ್ಮಾನ ಸಾಧ್ಯತೆಯಿದೆ. […]

Advertisement

Wordpress Social Share Plugin powered by Ultimatelysocial