ಅದಾನಿ ಪರ ಬ್ಯಾಟಿಂಗ್ ಮಾಡಿದ ವೀರೇಂದ್ರ ಸೆಹ್ವಾಗ್.

ಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ಅದಾನಿ ಸಮೂಹದ ಕುರಿತ ವರದಿ ಬಿಡುಗಡೆ ಮಾಡಿದ ಬಳಿಕ ಆ ಕಂಪನಿಯ ಷೇರುಗಳು ಪಾತಾಳಕ್ಕೆ ಕುಸಿದಿವೆ. ಅಲ್ಲದೆ ಈ ಎಲ್ಲ ಬೆಳವಣಿಗೆ ಕಾರಣಕ್ಕೆ ಗೌತಮ್ ಅದಾನಿ ಸಂಪತ್ತಿನಲ್ಲಿ ತೀವ್ರ ಇಳಿಕೆ ಕಂಡುಬಂದಿದೆ.ಹೀಗಾಗಿ ಭಾರತೀಯ ಶ್ರೀಮಂತರ ಪಟ್ಟಿಯಲ್ಲಿ ಮೊದಲನೇ ಹಾಗೂ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಗೌತಮ್ ಅದಾನಿ, ಈಗ ವಿಶ್ವದ ಟಾಪ್ 20 ಶ್ರೀಮಂತರ ಪಟ್ಟಿಯಿಂದಲೂ ಹೊರ ಬಿದ್ದಿದ್ದಾರೆ.ಇದರ ಮಧ್ಯೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ಅದಾನಿ ಸಮೂಹದ ಪರ ಬ್ಯಾಟಿಂಗ್ ಮಾಡಿದ್ದಾರೆ.ಈ ಕುರಿತಂತೆ ಟ್ವೀಟ್ ಮಾಡಿರುವ ವೀರೇಂದ್ರ ಸೆಹ್ವಾಗ್, ವಿದೇಶಿಗರು ಭಾರತದ ಬೆಳವಣಿಗೆಯನ್ನು ಸಹಿಸಿಕೊಳ್ಳುವುದಿಲ್ಲ. ಹೀಗಾಗಿಯೇ ಇಂತಹ ಪಿತೂರಿಗಳನ್ನು ನಡೆಸುತ್ತಾರೆ. ಆದರೆ ಭಾರತ ಇದೆಲ್ಲದರಿಂದ ಹೊರಬಂದು ಮತ್ತಷ್ಟು ಸಶಕ್ತವಾಗಿ ಹೊರ ಹೊಮ್ಮಲಿದೆ ಎಂದು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟರ್ಕಿಯಲ್ಲಿ 24 ಗಂಟೆಗಳಲ್ಲಿ 3 ಬಾರಿ ಪ್ರಬಲ ಭೂಕಂಪ.

Tue Feb 7 , 2023
ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಒಂದೇ ದಿನ ಮೂರು ಬಾರಿ ಪ್ರಬಲ ಭೂಕಂಪ ಸಂಭವಿಸಿದ್ದು, 3,600 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕ ಮಂದಿ ಕಟ್ಟಡ ಅವಶೇಷಗಳಡಿ ಸಿಲುಕಿದ್ದು, ಅವರನ್ನು ರಕ್ಷಣಾ ತಂಡಗಳು ಹೊರ ತೆಗೆಯುವ ಯತ್ನ ನಡೆಸುತ್ತಿವೆ.7.8 ತೀವ್ರತೆಯ ಭೂಕಂಪಕ್ಕೆ ಟರ್ಕಿ ನಲುಗಿದೆ. ಜನರು ನಿದ್ರಿಸುತ್ತಿರುವಾಗಲೇ ಈ ಘೋರ ಘಟನೆ  ನಡೆದಿದೆ.  ಭೂಕಂಪದಿಂದಾಗಿ ಹಲವು ಕಟ್ಟಡಗಳು ನೆಸಮವಾಗಿದ್ದು, ಅದರಲ್ಲಿ ವಾಸಿಸುತ್ತಿದ್ದ ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ, […]

Advertisement

Wordpress Social Share Plugin powered by Ultimatelysocial