ಅಪ್ಪು ನಡೆಸುತ್ತಿದ್ದ ಶಾಲೆಯ ಹೊಣೆ ಹೊತ್ತ ನಟ ವಿಶಾಲ್​ಗೆ ಭಾರಿ ಆಘಾತ:

 

ಚೆನ್ನೈ: ನಟ ಪುನೀತ್​ ರಾಜ್​ಕುಮಾರ್​ ಅವರ ಅಕಾಲಿನ ಸಾವಿನ ನಂತರ ಅವರು ನಡೆಸುತ್ತಿದ್ದ ಶಾಲೆಗಳ ಸುಮಾರು 1800 ಮಕ್ಕಳ ಜವಾಬ್ದಾರಿಯನ್ನು ತಾನು ಹೊರುವುದಾಗಿ ಹೇಳಿ ಕನ್ನಡದ ಭಾರಿ ಅಭಿಮಾನಿಗಳನ್ನು ಗಳಿಸಿರುವ ತಮಿಳು ನಟ ವಿಶಾಲ್​ಗೆ ಮತ್ತೊಮ್ಮೆ ಭಾರಿ ಆಘಾತ ಉಂಟಾಗಿದೆ.

ಸಾಹಸ ದೃಶ್ಯಗಳಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿರುವ ನಟ ವಿಶಾಲ್​ಗೆ ಇದೀಗ ಮತ್ತೆ ಅದೇ ದೃಶ್ಯ ಕೈಕೊಟ್ಟಿದೆ. ಕಳೆದ ಫೆಬ್ರುವರಿಯಲ್ಲಿ ಲಾಠಿ ಚಿತ್ರೀಕರಣದ ವೇಳೆ ಹೇರ್​ಲೈನ್​ ಫ್ರ್ಯಾಕ್ಚರ್​ ಆಗಿತ್ತು. ಲಾಠಿ ಚಿತ್ರದಲ್ಲಿ ಇವರು ಪೊಲೀಸ್ ಅಧಿಕಾರಿಯಾಗಿ ಪಾತ್ರ ನಿರ್ವಹಿಸಿದ್ದರು. ಮಗುವೊಂದನ್ನು ಎತ್ತಿಕೊಂಡು ಆಳವಾದ ಜಾಗಕ್ಕೆ ಧುಮುಕುವ ಸಂದರ್ಭದಲ್ಲಿ ಅನಾಹುತ ಸಂಭವಿಸಿತ್ತು. ಇದರ ಬೆನ್ನಲ್ಲೇ ಇದೀಗ `ಲತ್ತಿಯ’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ವೇಳೆ ಗಾಯಗೊಂಡಿದ್ದಾರೆ. ಫೈಟ್‌ ಸೀನ್‌ ಚಿತ್ರೀಕರಿಸುವಾಗ ಗಾಯಗಳಾಗಿದ್ದು, ಸದ್ಯ ಚಿತ್ರೀಕರಣಕ್ಕೆ ಬ್ರೇಕ್‌ ಹಾಕಲಾಗಿದೆ.

ಲತ್ತಿಯ ಚಿತ್ರದಲ್ಲಿ ಕೂಡ ವಿಶಾಲ್​ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿದಿದೆ. ಆಯಕ್ಷನ್ ಸೀನ್ಸ್ ಶೂಟಿಂಗ್‌ ಮಾಡುವಾಗ ಗಾಯಗೊಂಡಿದ್ದಾರೆ. ಈ ಸಿನಿಮಾಗಾಗಿ ವಿಶಾಲ್ ಸಿಕ್ಕಾಪಟ್ಟೆ ವರ್ಕೌಟ್ ಮಾಡಿದ್ದರು. ಈ ವಿಡಿಯೋ ಸಖತ್ ವೈರಲ್ ಕೂಡ ಆಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಸೇರಿದ ಮಾಜಿ ಎಂಎಲ್‌ಸಿ ಶ್ರೀನಾಥ್ !

Mon Jul 4 , 2022
  ಬೆಂಗಳೂರು ಜುಲೈ 03: ಮಾಜಿ ಸಂಸದ ಎಚ್. ಜಿ. ರಾಮುಲು ಪುತ್ರ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಶ್ರೀನಾಥ್ ಬೆಂಬಲಿಗರ ಜೊತೆ  “ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಪಕ್ಷಕ್ಕೆ ಬರಮಾಡಿಕೊಂಡರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ. ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮುಂತಾದವರು ಉಪಸ್ಥಿತರಿದ್ದರು. ಡಿ. ಕೆ. ಶಿವಕುಮಾರ್‌ […]

Advertisement

Wordpress Social Share Plugin powered by Ultimatelysocial