ಚುನಾವಣೆ ಪ್ರಚಾರಕ್ಕೆ ಅಡ್ಡಿ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಯಿಲ್ಲ ಎಂದು ನಾಯಕ ಸಮುದಾಯದಿಂದ ಮತದಾನ ಬಹಿಷ್ಕಾರ ಮಾಡಿ ಪ್ರತಿಭಟನೆ. ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿರುವ ಗ್ರಾಮಸ್ಥರು.
ಕುಡಿಯುವ ನೀರಿನ ಸಮಸ್ಯೆ, ರಸ್ತೆಯ ಸಮಸ್ಯೆ, ಕಸ ವಿಲೇವಾರಿ ಮಾಡಿಲ್ಲ, ಚರಂಡಿ ಸ್ವಚ್ಛತೆ ಮಾಡದೇ ರೋಗರುಜಿನ ಹರಡುತ್ತಿದೆ ಎಂದು ದೂರಿದರು. ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ, ಮತ್ತು ಶಾಸಕರಿಗೆ ಹಲವಾರು ಭಾರಿ ದೂರು ನೀಡಿದರು ಪ್ರಯೋಜನ ಆಗಿಲ್ಲ,ಆಗಾಗಿ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದರು.
ಈ ಭಾರಿಯ ವಿಧಾನ ಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಎಲ್ಲರೂ ನಿರ್ಧಾರ ಮಾಡಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ನವೀನ್ ಕುಮಾರ, ರಾಮಕೃಷ್ಣ, ನಾಗರಾಜು, ಗೋಪಾಲ ನಾಯಕ, ರಘು, ನಾಗಮ್ಮ,ವೆಂಕಟೇಶ್, ಶಾಂತಮ್ಮ, ರವಿ, ಮಹಾದೇವನಾಯಕ, ಸುರೇಶ್ ನಾಯಕ ಇತರರು ಹಾಜರಿದ್ದರು.
https://play.google.com/store/apps/details?id=com.speed.newskannada