ಕಾಲುವೆಯಲ್ಲಿ ದೊರೆತ ಮತ್ತೋರ್ವ ವಿದ್ಯಾರ್ಥಿ ಮೃತದೇಹ.
ಸಂತೋಷ್(14) ಮೃತಪಟ್ಟಿರುವ ವಿದ್ಯಾರ್ಥಿ.
ನೆನ್ನೆ ಜಿನೇದ್ ಬಾಷಾ(15) ವಿದ್ಯಾರ್ಥಿಯ ಮೃತದೇಹ ದೊರೆತಿತ್ತು.
ಇನ್ನುಳಿದ ಮೂವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಓರ್ವನನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು.
ಇಂದು ಬೆಳಿಗ್ಗೆ ಅಗ್ನಿಶಾಮಕ ದಳದಿಂದ ಮತ್ತೋರ್ವ ವಿದ್ಯಾರ್ಥಿ ಮೃತದೇಹ ಹೊರತೆಗೆಯಲಾಗಿದೆ.
ಏಳು ಮಂದಿ ವಿದ್ಯಾರ್ಥಿಗಳು ನೆನ್ನೆ ಮಧ್ಯಾಹ್ನ ಈಜಲು ತೆರಳಿದ್ದರು.
ದಕ್ಷಿಣ ಪಿನಾಕಿನಿ ನದಿ ಕಾಲುವೆಗೆ ತೆರಳಿದ್ದ ವಿದ್ಯಾರ್ಥಿಗಳು.
ದೇವನಹಳ್ಳಿ ತಾಲೂಕಿನ ದೇವನಾಯಕನಹಳ್ಳಿ ಬಳಿ ಘಟನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳು.
ಘಟನೆ ನಂತರ ವಸತಿ ಶಾಲೆಯ ಸಿಬ್ಬಂದಿಗಳು ಪರಾರಿ.
ಶಾಲೆಯ ಇತರೆ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದಾಗ ಶಾಲೆಯಲ್ಲಿಯೇ ಉಳಿದಂತಹ ವಿದ್ಯಾರ್ಥಿಗಳು ಈಜಲು ತೆರಳಿದ್ದಾಗ ದುರ್ಘಟನೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…