ವಾಣಿಜ್ಯ ನಗರೀ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಕಳೆದ ಒಂದು ತಿಂಗಳಿನಿಂದಲ್ಲೂ ಬಹುತೇಕವಾಗಿ ಎಲ್ಲಾ ವಾರ್ಡ್ ಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ವಾರಕ್ಕೆ ಒಮ್ಮೆ ಬಿಡುತ್ತಿದ್ದ ನೀರು, ಈಗ ೧೫ ದಿನಗಳಾದರೂ ನೀರು ಬರುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು. ಭೂತ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ಒಂದು ಸಾವಿರ ಪ್ರದರ್ಶನ ಮಾಡುವ ಮೂಲಕ ಮಹಾನಗರ ಪಾಲಿಕೆಗೆ ಹಿಡಿ ಶಾಪ ಹಾಕಿದರು. ಪ್ರಮುಖವಾಗಿ ಈ ಹಿಂದೆ ಪಾಲಿಕೆ ಅಧೀನದಲ್ಲಿದ್ದ ನೀರು ಸರಬರಾಜು ಈಗ ಖಾಸಗಿ ಕಂಪನಿಗೆ ನೀಡಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸರಿಯಾದ ಮಾಹಿತಿ ಕೊರತೆಯಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಈ ಕೂಡಲೇ ನೀರಿನ ಸಮಸ್ಯೆಯನ್ನು ಬಗೆಹರಿಸಲು ಎಲ್ ಅಂಡ್ ಟಿ ಕಂಪನಿ ಹಳೆಯ ಸಿಬ್ಬಂದಿಗಳನ್ನು ಮರು ನೇಮಕ ಮಾಡಬೇಕೆಂದು ಆಗ್ರಹಮಾಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada