ಕಬಿನಿ ಉದ್ಯಾನದ ಕಾಮಗಾರಿಯನ್ನು ಈ ವರ್ಷವೇ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ.
ಕಬಿನಿ ಜಲಾಶಯದಲ್ಲಿ ಸಾಂಪ್ರದಾಯಿಕ ಬಾಗಿನ ಅರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಜಲಾಶಯದ ಬಳಿಯಿರುವ ಕಬಿನಿ ಉದ್ಯಾನವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಸರ್ಕಾರ ಅಭಿವೃದ್ಧಿಪಡಿಸಬೇಕೆ ಎಂಬ ಬಗ್ಗೆ ರಾಜ್ಯ ಸರ್ಕಾರ ಇನ್ನೂ ನಿರ್ಧರಿಸಿಲ್ಲ. ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಂಡು ಈ ವರ್ಷವೇ ಕಾಮಗಾರಿ ಆರಂಭಿಸಲಾಗುವುದು.
ಎಚ್.ಡಿ.ಕೋಟೆ ತಾಲೂಕು ಹಿಂದುಳಿದಿರುವಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ‘ನಂಜುಂಡಪ್ಪ ವರದಿಯಲ್ಲೂ ಪ್ರಸ್ತಾಪವಾಗಿದೆ.ಇದರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ.
ಅತಿ ಹೆಚ್ಚು ತರಗತಿ ಕೊಠಡಿಗಳ ನಿರ್ಮಾಣ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದ್ದು, ರಸ್ತೆ ಹಾಗೂ ಮನೆಗಳ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: