ಯಾದಗಿರಿಯಲ್ಲಿ ಗ್ರಾಹಕನ ಗಮನ ಬೇರೆಡೆ ಸೆಳೆದು 5 ಲಕ್ಷ ಹಣ ದರೋಡೆ… ಓರ್ವ ಆರೋಪಿ ಬಂಧನ

ಯಾದಗಿರಿ: ಯಾದಗಿರಿ ಪಟ್ಟಣದಲ್ಲಿ ವ್ಯಕ್ತಿಯೊಬ್ಬರ ಗಮನ ಬೇರೆಡೆ ಸೆಳೆದು 5 ಲಕ್ಷ ಹಣ ದರೋಡೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಎಸ್​​ಬಿಎಂ ಬ್ಯಾಂಕ್​ನಿಂದ ಖಾಜಾಸಾಬ್​ ಎಂಬುವರು ಹಣ ಡ್ರಾ ಮಾಡಿಕೊಂಡು ಬರುತ್ತಿದ್ದ ವೇಳೆ ಗುಂಜಿ ಜಬ್ಬರಾಜ್ ಎಂಬಾತ  ರಸ್ತೆಯಲ್ಲಿ ಹಣ ಬಿದ್ದಿದೆ ಎಂದು ಅವರ ಬೇರೆಡೆ ಗಮನ ಸೆಳೆದು ಹಣ ದೋಚಿದ್ದ. ಆತನನ್ನು ಪೊಲೀಸರು ಬಂಧಿಸಿ 4.5 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಜಬ್ಬರಾಜ್  ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿಂದೆ ಯಾವುದಾದರೂ ಪ್ರಕರಣದಲ್ಲಿ ಭಾಗಿಯಾಗಿದ್ದಾನಾ ಎಂಬ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಡಿವೈಎಸ್ ಪಿ ವೀರೇಶ್ , ಇನ್ಸ್ ಪೆಕ್ಟರ್   ದೀಪಕ್    , ಪಿಎಸ್ ಐ ಚಂದ್ರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಈ ಕಾರ್ಯಾಚರಣೆ ತಂಡವನ್ನು ಎಸ್ ಪಿ ವೇದಮೂರ್ತಿ ಶ್ಲಾಘಿಸಿದ್ದಾರೆ.

ತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಡಿಕೆಶಿ-ಸಿದ್ದರಾಮಯ್ಯ ಮನಸ್ತಾಪದ ಪಿಸುಮಾತು ರಾಜ್ಯಕ್ಕೆ ಕೇಳಿಸುತ್ತಿತ್ತು'

Tue May 24 , 2022
  ಬೆಂಗಳೂರು, ಮೇ 24: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಡುವಿನ ಮನಸ್ತಾಪದ ಬೇಗುದಿ ದೆಹಲಿಯ ಹೈಕಮಾಂಡಿಗೂ ತಟ್ಟಿದೆ ಎಂದು ಕರ್ನಾಟಕ ಬಿಜೆಪಿ ಐಟಿ ಸೆಲ್ ಲೇವಡಿ ಮಾಡಿದೆ. ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆಯ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ರಾಜಧಾನಿಯಲ್ಲಾಗಲಿ, ರಾಜಸ್ಥಾನದಲ್ಲಾಗಲಿ ಎಷ್ಟೇ ಫೋಟೋ ಶೂಟ್ ನಡೆಸಿದರೂ, ಇಬ್ಬರ ನಡುವಿನ ಶೀತಲ ಸಮರ ಕಮ್ಮಿಯಾಗುವುದೇ? ಎಂದು ಪ್ರಶ್ನಿಸಿದೆ. […]

Advertisement

Wordpress Social Share Plugin powered by Ultimatelysocial