ಯಾದಗಿರಿ: ಯಾದಗಿರಿ ಪಟ್ಟಣದಲ್ಲಿ ವ್ಯಕ್ತಿಯೊಬ್ಬರ ಗಮನ ಬೇರೆಡೆ ಸೆಳೆದು 5 ಲಕ್ಷ ಹಣ ದರೋಡೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎಸ್ಬಿಎಂ ಬ್ಯಾಂಕ್ನಿಂದ ಖಾಜಾಸಾಬ್ ಎಂಬುವರು ಹಣ ಡ್ರಾ ಮಾಡಿಕೊಂಡು ಬರುತ್ತಿದ್ದ ವೇಳೆ ಗುಂಜಿ ಜಬ್ಬರಾಜ್ ಎಂಬಾತ ರಸ್ತೆಯಲ್ಲಿ ಹಣ ಬಿದ್ದಿದೆ ಎಂದು ಅವರ ಬೇರೆಡೆ ಗಮನ ಸೆಳೆದು ಹಣ ದೋಚಿದ್ದ. ಆತನನ್ನು ಪೊಲೀಸರು ಬಂಧಿಸಿ 4.5 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಜಬ್ಬರಾಜ್ ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿಂದೆ ಯಾವುದಾದರೂ ಪ್ರಕರಣದಲ್ಲಿ ಭಾಗಿಯಾಗಿದ್ದಾನಾ ಎಂಬ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಡಿವೈಎಸ್ ಪಿ ವೀರೇಶ್ , ಇನ್ಸ್ ಪೆಕ್ಟರ್ ದೀಪಕ್ , ಪಿಎಸ್ ಐ ಚಂದ್ರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಈ ಕಾರ್ಯಾಚರಣೆ ತಂಡವನ್ನು ಎಸ್ ಪಿ ವೇದಮೂರ್ತಿ ಶ್ಲಾಘಿಸಿದ್ದಾರೆ.
ತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada