ಮೇ 10ರೊಳಗೆ ಸಂಪುಟ ಪುನಾರಚನೆ ನಿಶ್ಚಿತ: ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯ

ಬೆಂಗಳೂರು:ಬಹು ನಿರೀಕ್ಷಿತ ಸಂಪುಟ ಪುನಾರಚನೆ ಮೇ 10ರೊಳಗೆ ನಡೆಯಲಿದೆ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಸಂಪುಟ ಪುನಾರಚನೆ ವಿಚಾರವಾಗಿ ದೆಹಲಿ ವರಿಷ್ಠರು ಕೈಗೊಳ್ಳುವ ತಿರ್ಮಾನಕ್ಕೆ ಬದ್ಧ ಎಂದರು.

ಸಂಪುಟ ಪುನಾರಚನೆ ಅಥವಾ ವಿಸ್ತರಣೆಯ ವಿಚಾರವಾಗಿ ಹೈಕಮಾಂಡ್‌ ಕೈಗೊಳ್ಳುವ ನಿರ್ಧಾರವೇ ಅಂತಿಮವಾಗಿದೆ.

ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ಧವಾಗಿರುತ್ತೇವೆ. ಈ ವಿಚಾರವಾಗಿ ಕೇಂದ್ರ ನಾಯಕರ ತೀರ್ಮಾನವೇ ಇದರಲ್ಲಿ ಅಂತಿಮ ಎಂದು ಹೇಳಿದರು.

ಬಿಜೆಪಿ ಕೇಂದ್ರ ನಾಯಕತ್ವವು ತಮ್ಮನ್ನು ಕರೆದ ತಕ್ಷಣ ರಾಜ್ಯ ಸಚಿವ ಸಂಪುಟದ ಬಗ್ಗೆ ಚರ್ಚಿಸಲು ನವದೆಹಲಿಗೆ ಹೋಗಲು ಸಿದ್ಧ ಎಂದು ಬೊಮ್ಮಾಯಿ ಗುರುವಾರ ಹೇಳಿದ್ದರು. ಬಹಳ ಜನ ಪಕ್ಷಕ್ಕೆ ಇನ್ನೂ ಬರುವವರಿದ್ದಾರೆ. ನಮ್ಮ ಪಕ್ಷ ಇನ್ನಷ್ಟು ಬಲವಾಗಲಿದೆ. ಪ್ರತಿ ಜಿಲ್ಲೆಯಿಂದಲೂ ಪಕ್ಷಕ್ಕೆ ಬರುತ್ತಾರೆ. ಅದರಲ್ಲೂ ಮಂಡ್ಯದಿಂದ ಅನೇಕ ಜನ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ. 150 ಸ್ಥಾನ ಗೆಲ್ಲುವುದು ನಮ್ಮ ಗುರಿ. ಪ್ರಧಾನಿಯವರಿಗೆ 150 ಕ್ಷೇತ್ರ ಗೆಲ್ಲುವ ಭರವಸೆ ಕೊಟ್ಟಿದ್ದೇವೆ. ಆ ಗುರಿ ಮುಟ್ಟಲು ರಾಜ್ಯ ಪ್ರವಾಸ ಮಾಡುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ಹೇಳಿಕೆ ಬಗ್ಗೆ ನಾನೇನೂ ಮಾತಾಡಲ್ಲ. ಪಕ್ಷದ ನಾಯಕರಿದ್ದಾರೆ, ಅವರು ನೋಡ್ಕೋತಾರೆ ಎಂದರು. ಚುನಾವಣಾ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಮೈಸೂರು, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಿಗೆ ಪ್ರವಾಸ ಮಾಡ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಸಿಎಂ ಸ್ಥಾನ 2,500 ಕೋಟಿ ಮಾರಾಟಕ್ಕಿದೆ ಎಂಬ ಅರ್ಥದಲ್ಲಿ ಯತ್ನಾಳ್ ಹೇಳಿಕೆ ನೀಡಿದ್ದರು. ಬೆಳಗಾವಿಯಲ್ಲಿ ಮಾತನಾಡಿದ್ದ ಅವರು, ದೆಹಲಿಯಿಂದ ನನ್ನ ಬಳಿಗೆ ಬಂದಿದ್ದ ಕೆಲವರು ನಿಮ್ಮನ್ನು ಸಿಎಂ ಮಾಡುತ್ತೇವೆ. 2,500 ಕೋಟಿ ಸಿದ್ಧವಿಟ್ಟುಕೊಳ್ಳಿ ಎಂದು ಹೇಳಿದ್ದರು ಎಂಬ ಸ್ಫೋಟಕ ಹೇಳಿಕೆಯನ್ನು ಯತ್ನಾಳ್ ನೀಡಿದ್ದಾರೆ. ಈ ಹೇಳಿಕೆ ಇದೀಗ ರಾಜಕೀಯವಾಗಿ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಿದೆ.

ಮೇ 5 ರಂದು ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮೇ 11 ಕ್ಕೆ ಮುಂದೂಡಲಾಗಿದ್ದು, ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬರುವ ನಿರೀಕ್ಷೆಯಿದೆ ಎಂಬ ವರದಿಗಳ ನಡುವೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆಗೆ ಅವಕಾಶ ಕಲ್ಪಿಸುವ ಊಹಾಪೋಹಗಳು ದಟ್ಟವಾಗಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಅವತಾರ ಪುರುಷ' ಚಿತ್ರ ವಿಮರ್ಶೆ; ಮಾಯಾ ಪುರುಷನ ತಂತ್ರ ಅವತಾರ

Sat May 7 , 2022
  ಆತ ನಿಜವಾಗಿಯೂ ಜ್ಯೂನಿಯರ್‌ ಆರ್ಟಿಸ್ಟಾ ಅಥವಾ ಜ್ಯೂನಿಯರ್‌ ಆರ್ಟಿಸ್ಟ್‌ ತರಹ ನಟಿಸುತ್ತಾ ಎಲ್ಲಾ ವಿದ್ಯೆಗಳನ್ನು ತಿಳಿದುಕೊಂಡಿರುವ ಮಾಯಾವಿನಾ… ಸಿನಿಮಾ ಮುಂದೆ ಸಾಗುತ್ತಿದ್ದಂತೆ ಇಂತಹ ಪ್ರಶ್ನೆಗಳು ಕೂಡಾ ಹುಟ್ಟಿಕೊಳ್ಳುತ್ತಾ ಹೋಗುತ್ತವೆ. ಆ ಪ್ರಶ್ನೆಗಳಿಗೆ ಮೊದಲ ಭಾಗದಲ್ಲಿ ಪೂರ್ಣ ಉತ್ತರ ಸಿಗುತ್ತದೆ ಎಂದು ಹೇಳುವಂತಿಲ್ಲ. ಆದರೆ, ಭರಪೂರ ಮನರಂಜನೆ ಮಾತ್ರ ಯಾವುದೇ ಕೊರತೆಯಿಲ್ಲ. ಈ ವಾರ ತೆರೆಕಂಡಿರುವ “ಅವತಾರ ಪುರುಷ’ ಸಿನಿಮಾದಲ್ಲಿ ಏನಿದೆ ಎಂದರೆ, ಒಂದು ಫ್ಯಾಮಿಲಿ ಜೊತೆಯಾಗಿ ಕುಳಿತು ನೋಡುವ […]

Advertisement

Wordpress Social Share Plugin powered by Ultimatelysocial