ಸಚಿವ ಸಂಪುಟ ವಿಸ್ತರಣೆ ಅಥವಾ ಖಾತೆ ಬದಲಾವಣೆಯೂ ಇಲ್ಲ, ಒಂದು ವೇಳೆ ಖಾತೆ ಬದಲಾವಣೆ ಮಾಡಬೇಕು ಅನ್ನುವುದಿದ್ದರೆ ಅದು ಸಿಎಂ ಅವರ ಪರಮಾಧಿಕಾರವಾಗಿದೆ. ಯಾಕೆ ನನ್ನ ಖಾತೆ ಮೇಲೆ ಕಣ್ಣಿಟ್ಟಿದ್ದೀರಿ ಎಂದು ಸಚಿವ ಎಸ್.ಟಿ. ಸೋಮಶೇಖರ್ ಶನಿವಾರ ಪತ್ರಕರ್ತರ ಕಾಲೆಳೆಡಿದ್ದಾರೆ.
ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಗಿಮಿಕ್ ರಾಜಕಾರಣ ಮಾಡುತ್ತಿದೆ. ಬುಎಸ್ ವೈ ಸಿಎಂ ಆಗಿದ್ದಾಗ ಹಾಗೂ ಈಗಿನ ಸಿಎಂ ಬೊಮ್ಮಾಯಿ ಅವರು ಕೇಂದ್ರ ಜಲಸಂಪನ್ಮೂಲ ಸಚಿವರ ಜತೆ ಮಾತುಕತೆ ನಡೆಸಿ ಎಲ್ಲಾ ಹಂತದ ಪ್ರಕ್ರಿಯೆ ಮುಗಿಸಿದ್ದಾರೆ. ಶೀಘ್ರದಲ್ಲಿಯೇ ಯೋಜನೆಗೆ ಒಪ್ಪಿಗೆ ಸಿಗುವ ಕಾರಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗಿಮಿಕ್ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಸೋಲಿಗೆ ಯಾವುದೇ ಒಳ ಏಟಿಲ್ಲ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಪಕ್ಷದ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಮುಖಂಡರು ಕೆಲಸ ಮಾಡಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿಲ್ಲ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: