ಯಾಕೆ ನನ್ನ ಖಾತೆ ಮೇಲೆ ಕಣ್ಣಿಟ್ಟಿದ್ದೀರಿ ಪತ್ರಕರ್ತರ ಕಾಲೆಳೆದ ಎಸ್.ಟಿ.ಸೋಮಶೇಖರ್

ಸಚಿವ ಸಂಪುಟ ವಿಸ್ತರಣೆ ಅಥವಾ ಖಾತೆ ಬದಲಾವಣೆಯೂ ಇಲ್ಲ, ಒಂದು ವೇಳೆ ಖಾತೆ ಬದಲಾವಣೆ ಮಾಡಬೇಕು ಅನ್ನುವುದಿದ್ದರೆ ಅದು ಸಿಎಂ ಅವರ ಪರಮಾಧಿಕಾರವಾಗಿದೆ. ಯಾಕೆ ನನ್ನ ಖಾತೆ ಮೇಲೆ ಕಣ್ಣಿಟ್ಟಿದ್ದೀರಿ ಎಂದು ಸಚಿವ ಎಸ್.ಟಿ. ಸೋಮಶೇಖರ್ ಶನಿವಾರ ಪತ್ರಕರ್ತರ ಕಾಲೆಳೆಡಿದ್ದಾರೆ.

ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಗಿಮಿಕ್ ರಾಜಕಾರಣ ಮಾಡುತ್ತಿದೆ. ಬುಎಸ್ ವೈ ಸಿಎಂ ಆಗಿದ್ದಾಗ ಹಾಗೂ ಈಗಿನ ಸಿಎಂ ಬೊಮ್ಮಾಯಿ ಅವರು ಕೇಂದ್ರ ಜಲಸಂಪನ್ಮೂಲ ಸಚಿವರ ಜತೆ ಮಾತುಕತೆ ನಡೆಸಿ ಎಲ್ಲಾ ಹಂತದ ಪ್ರಕ್ರಿಯೆ ಮುಗಿಸಿದ್ದಾರೆ. ಶೀಘ್ರದಲ್ಲಿಯೇ ಯೋಜನೆಗೆ ಒಪ್ಪಿಗೆ ಸಿಗುವ ಕಾರಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗಿಮಿಕ್ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿ ಅಭ್ಯರ್ಥಿ ಸೋಲಿಗೆ ಯಾವುದೇ ಒಳ ಏಟಿಲ್ಲ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಪಕ್ಷದ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಮುಖಂಡರು ಕೆಲಸ ಮಾಡಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿಲ್ಲ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

 

Please follow and like us:

Leave a Reply

Your email address will not be published. Required fields are marked *

Next Post

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡ ಪಾಪಿಗಳು

Sun Dec 26 , 2021
ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದದ್ದು ಮಾತ್ರವಲ್ಲದೇ ಆಕೆಯ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆಘಾತಕಾರಿ ಘಟನೆಯು ಉತ್ತರ ಪ್ರದೇಶದ ಪ್ರಯಾಗ್​ ರಾಜ್​ ನಲ್ಲಿ ನಡೆದಿದೆ. ಸೂಕ್ತ ಮಾಹಿತಿ ಆಧರಿಸಿದ ಪೊಲೀಸರು ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವನ್ನು ಹರಿಬಿಟ್ಟ ಇನ್ನಿಬ್ಬರು ಯುವಕರನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನೈನಿ ಪ್ರದೇಶದ ನಿವಾಸಿಯಾದ ಸಂತ್ರಸ್ತೆಯ ತಂದೆ ಈ ವಿಚಾರವಾಗಿ ಮಾತನಾಡಿದ್ದು, ನನ್ನ […]

Advertisement

Wordpress Social Share Plugin powered by Ultimatelysocial