ಯಳಂದೂರಿನ ಕೃಷಿ ಇಲಾಖೆಯಲ್ಲಿ 2022-23ನೇ ಸಾಲಿನ ಕೃಷಿ ಯಾಂತ್ರಿಕರಣ ಯೋಜನೆಯಡಿಯಲ್ಲಿ ಶಾಸಕ ಎನ್. ಮಹೇಶ್ 22 ಫಲನುಭವಿ ರೈತರಿಗೆ ಪವರ್ ಟಿಲ್ಲರ್ ವಿತರಣೆ ಮಾಡಿದರು…..ನಂತರ ಮಾತನಾಡಿ, ಸರಕಾರದಿಂದ ರೈತರ ಅಭಿವೃದ್ಧಿಗಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ರೈತರು ಕೃಷಿ ಇಲಾಖೆಯಿಂದ ದೊರೆಯುವ ಪರಿಕರಗಳನ್ನು ಪಡೆದು ಅದನ್ನು ಮಾರಾಟ ಮಾಡಿಕೊಳ್ಳದೇ ತಾವೇ ಬಳಕೆ ಮಾಡಿಕೊಳ್ಳುವ ಮೂಲಕ ಸವಲತ್ತುಗಳ ಸದುಪಯೋಗಪಡಿಸಿಕೊಳ್ಳಬೇಕು…ಕೃಷಿ ಇಲಾಖೆ ವತಿಯಿಂದ ರೈತರಿಗೆ ಅನೇಕ ಉಪಕರಣಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ.ಪ್ರಮುಖವಾಗಿ ಟಾರ್ಪಲ್, ಟಿಲ್ಲರ್ ಸೇರಿದಂತೆ ಇತರೆ ಪರಿಕರಗಳನ್ನು ನೀಡಲಾಗುತ್ತಿದ್ದು ಅವುಗಳನ್ನು ಪಡೆದುಕೊಂಡು ಆದಾಯ ಗಳಿಸಿ ಎಂದರು…ರೈತರು ಸರ್ಕಾರಿ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಿ ಎಂದು ತಿಳಿಸಿದರು…..ಕಾರ್ಯಕ್ರಮದಲ್ಲಿ ಬಿಜೆಪಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಾರ್ಯಕರ್ತರು ಹಾಗೂ ರೈತರು ಹಾಜರಿದ್ದರು…..
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada