‘ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು’ ಎಂದು ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ರಾಮಕೃಷ್ಣ ಎಂಬಾತ ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಡೆತ್ ನೋಟ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಮನವಿ ಮಾಡಿದ್ದಾನೆ.ಡೆತ್ ನೋಟ್ ನಲ್ಲಿ ನಾನು ಎಲ್ಲರಿಗೂ ನೋವು ಕೊಟ್ಟಿದ್ದೇನೆ. ಅಮ್ಮನಿಗೆ ಒಳ್ಳೆಯ ಮಗನಾಗಲಿಲ್ಲ. ಅಣ್ಣನಿಗೆ ತಮ್ಮನಾಗಲಿಲ್ಲ. ಸ್ನೇಹಿತರಿಗೆ ಒಳ್ಳೆಯ ಗೆಳೆಯನಾಗಲಿಲ್ಲ. ನನ್ನ ಹುಡುಗಿಗೆ ಒಳ್ಳೆಯ ಸಂಗಾತಿ ಆಗಲಿಲ್ಲ. ಆದ್ದರಿಂದ ನಿಮ್ಮನ್ನು ಬಿಟ್ಟು ದೂರ ಹೋಗುತ್ತಿದ್ದೇನೆ ಎಲ್ಲರೂ ಕ್ಷಮಿಸಿ ಎಂದು ಬರೆದಿದ್ದಾನೆ. ಅಭಿಮಾನಿಯ ಈ ಕೋರಿಕೆ ಈಡೇರಿಸಲು ಸಿದ್ದರಾಮಯ್ಯ ಇಂದು ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬಸ್ ಗಾಗಿ ವಿದ್ಯಾರ್ಥಿಗಳ ಪರದಾಟ