ಬೆಂಗಳೂರು: ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಮಾಡುವ ವಿಚಾರವಾಗಿ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಂದ್ ಬಗ್ಗೆ ದೊಡ್ಡವರು ಏನು ನಿರ್ಧಾರ ಮಾಡುತ್ತಾರೋ ಮಾಡಲಿ.
ಜನ ಸಾಮಾನ್ಯರಿಗೆ ತೊಂದರೆ ಆಗುವಂತೆ,
ನಮಗೆ ನಾವು ನಷ್ಟ ಮಾಡಿಕೊಂಡು ಇನ್ನೊಬ್ಬರ ಮೇಲೆ ಪ್ರತಿಭಟನೆ ಮಾಡಬಾರದು ಎಂಬುದು ನನ್ನ ನಂಬಿಕೆ. ನಾನು ಏನೇ ಮಾತನಾಡಿದರೂ ಅದು ಬೇರೆ ರೀತಿಯಲ್ಲಿ ಅರ್ಥೈಸಲ್ಪಡಬಹುದು. ಹೀಗಾಗಿ ದೊಡ್ಡವರ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಯಶ್ ಮಾಹಿತಿ ನೀಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: