ಗುರು ದೇಶಪಾಂಡೆ ಅವರಿಂದ “ಸೀತಮ್ಮನ ಮಗ” ನ ಹಾಡುಗಳ ಬಿಡುಗಡೆ.

 

ಪತ್ರಕರ್ತ ಯತಿರಾಜ್ ನಿರ್ದೇಶಿಸಿ, ನಟಿಸಿರುವ “ಸೀತಮ್ಮನ ಮಗ” ಚಿತ್ರದ ಹಾಡುಗಳನ್ನು ನಿರ್ದೇಶಕ-ನಿರ್ಮಾಪಕ ಗುರು ದೇಶಪಾಂಡೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.
ಚಿತ್ರದ ಚಿತ್ರೀಕರಣವನ್ನು ಚಿತ್ರದುರ್ಗದ ಬಳಿಯ ಪಂಡರಹಳ್ಳಿಯಲ್ಲಿ ಮಾಡಿದ್ದೇವೆ. ಸದ್ಯ ಸಂಗೀತ ನಿರ್ದೇಶಕ ವಿನು ಮನಸು ಹಿನ್ನೆಲೆ ಸಂಗೀತ ಅಳವಡಿಸುತ್ತಿದ್ದಾರೆ. ಸದ್ಯದಲ್ಲೇ ನಮ್ಮ ಚಿತ್ರ ತೆರೆಗೆ ಬರಲು ಸಿದ್ದವಾಗಲಿದೆ. ಎಲ್ಲಾ ಕಲಾವಿದರು ಅದ್ಭುತವಾಗಿ ನಟಿಸಿದ್ದಾರೆ. ತಂತ್ರಜ್ಞರ ಕೈ ಚಳಕವೂ ಚೆನ್ನಾಗಿದೆ. ಎರಡು ಹಾಡುಗಳನ್ನು ಮಾನಸ ಹೊಳ್ಳ ಹಾಗೂ ಮೆಹಬೂಬ್ ಸಾಬ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಇಸ್ಮು ಮ್ಯೂಸಿಕ್ ಮೂಲಕ ಈ ಹಾಡುಗಳು ಬಿಡುಗಡೆಯಾಗಿದೆ ಎಂದು ನಿರ್ದೇಶಕ ಯತಿರಾಜ್ ಸಿನಿಮಾ ಕುರಿತು ವಿವರಣೆ ನೀಡಿದರು.  ಬಹಳ ವರ್ಷಗಳ ನಂತರ ನನ್ನ ಆಸೆ ಈಡೇರಿದೆ. ನಾನು ಸಿನಿಮಾ ಆರಂಭಿಸುವುದಾಗಿ ಹೇಳಿದಾಗ ಸಾಕಷ್ಟು ಜನ ನಿರ್ದೇಶಕರು ಫೋನ್ ಮಾಡಿದ್ದರು. ಆದರೆ ನಾನು ಯತಿರಾಜ್ ಅವರಿಗೆ ಸಿನಿಮಾ ಮಾಡಲು ಹೇಳಿದೆ. ಯತಿರಾಜ್ ಬಿಟ್ಟರೆ ಯಾರಿಂದಲೂ ಇಷ್ಟು ಚೆನ್ನಾಗಿ ಚಿತ್ರ ನಿರ್ದೇಶನ ಮಾಡಲು ಆಗುತ್ತಿರಲಿಲ್ಲವೇನೋ? ಎಂಬುದು ನನ್ನ ಅನಿಸಿಕೆ ಎಂದರು ನಿರ್ಮಾಪಕ ಮಂಜುನಾಥ್ ನಾಯಕ್.ಸಹ ನಿರ್ಮಾಪಕ ಸುಮಿತ್ ನಾಯಕ್, ಮುಪ್ಪಣ್ಣ ಗೌಡ್ರು, ಸಂಗೀತ ನಿರ್ದೇಶಕ ವಿನು ಮನಸು, ಇಸ್ಮು ಮ್ಯೂಸಿಕ್ ನ ಇಸ್ಮಾಯಿಲ್, ಸೀತಮ್ಮನ ಪಾತ್ರಧಾರಿ ಚೈತ್ರ ಶ್ರೀನಿವಾಸ್, ಸೀತಮ್ಮನ ಮಗನಾಗಿ ಅಭಿನಯಿಸಿರುವ ಚರಣ್ ಕಾಸಾಲ ಹಾಗೂ ನಟಿ ಸೋನು ಸಾಗರ ಚಿತ್ರದ ಕುರಿತು ಮಾತನಾಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಕ್ರಮ ಸಂಬಂಧ ನೋಡಿದ ಪುತ್ರನ ಜೀವ ತೆಗೆದ ತಾಯಿ, ಪ್ರಿಯಕರನೊಂದಿಗೆ ಸೇರಿ ಕೊಲೆ

Wed Mar 2 , 2022
  ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮ್ಯಾದರಡೊಕ್ಕಿ ಗ್ರಾಮದಲ್ಲಿ ವ್ಯಕ್ತಿ ನಾಪತ್ತೆಯಾಗಿದ್ದು, ಪೊಲೀಸರ ತನಿಖೆಯಲ್ಲಿ ಆತ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಾಯಿ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 22 ವರ್ಷದ ಬಸವರಾಜ ನಾಪತ್ತೆಯಾಗಿರುವುದಾಗಿ ಆತನ ಮಾವ ಶರಣಪ್ಪಗೌಡ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಬಸವರಾಜ ಕೊಲೆಯಾಗಿರುವುದು ಗೊತ್ತಾಗಿದೆ. ತಾಯಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಅಮರಪ್ಪನೊಂದಿಗೆ ಬಸವರಾಜ ಜಗಳವಾಡಿದ್ದಾನೆ. ಬಳಿಕ […]

Advertisement

Wordpress Social Share Plugin powered by Ultimatelysocial