ನಾನು ತಗ್ಗೋ ಮಗನೇ ಅಲ್ಲ: ಯತ್ನಾಳ್‌ ತಿರುಗೇಟು!

 

ನನ್ನನ್ನು ಪಕ್ಷದಿಂದ ಹೊರಗೆ ಹಾಕಿಬಿಡ್ತಾರೆ, ಶಿಸ್ತು ಕ್ರಮ ಕೈಗೊಳ್ತಾರೆ ಅಂತ ಯಾರೂ ಖುಷಿಪಡಬೇಡಿ. ಅದು ಯಾವುದೂ ಆಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

ವಿಜಯಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸತ್ಯ ಮಾತನಾಡಿದ್ದೇನೆ.

ಸತ್ಯ ಯಾವಾಗಿತ್ತಿದ್ದರೂ ಚಿನ್ನ ಇದ್ದಂತೆ. ಸುಳ್ಳು ಹೇಳಿಲ್ಲ ನಾನು ಎಂದು ಸಿಎಂ ಸ್ಥಾನಕ್ಕೆ 2500 ಕೋಟಿ ಆಫರ್‌ ಮಾಡಿದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಟೀವಿ ಚಾನೆಲ್‌ ಗಳಲ್ಲಿ ಕುಳಿತು. ಯತ್ನಾಳ್‌ ಉಚ್ಛಾಟನೆ ಮಾಡಲು ಹೈಕಮಾಂಡ್‌ ಗೆ ತಾಕತ್ತು ಇಲ್ಲವಾ? ಯತ್ನಾಳ್‌ ಫಿಲ್ಟರ್‌ ಇಲ್ಲದ ಹೇಳಿಕೆ ನೀಡ್ತಾರೆ ಅಂತೆಲ್ಲಾ ಹೇಳ್ತಾರೆ. ಸತ್ಯ ಹೇಳಬೇಕಾದರೆ ಫಿಲ್ಟರ್‌ ಇರಲ್ಲ. ಸುಳ್ಳು ಹೇಳಬೇಕಾದರೆ ಫಿಲ್ಟರ್‌ ಇರುತ್ತೆ ಎಂದು ಮಾಧ್ಯಮಗಳಿಗೆ ತಿರುಗೇಟು ನೀಡಿದರು.

ನನ್ನ ಹೇಳಿಕೆ ಹಿಡಿದುಕೊಂಡು ಡಿಕೆ ಶಿವಕುಮಾರ್‌ ಟ್ವಿಟ್‌ ಮಾಡುತ್ತಿದ್ದಾರೆ. ಅಂದರೆ ಅವರಿಗೆ ನನ್ನ ಬಗ್ಗೆ ಭಯ ಶುರುವಾಗಿದೆ ಅಂತ ಅರ್ಥ. ಬಿಬಿಎಂಪಿ ಎಂಬ ಚರಂಡಿಯನ್ನು ಅವರು ಬಿದ್ದು ಒದ್ದಾಡುತ್ತಿದ್ದಾರೆ. ಅವರು ನನಗೆ ಹೇಳುವ ಅಗತ್ಯವಿಲ್ಲ ಎಂದು ಯತ್ನಾಳ್‌ ತಿರುಗೇಟು ನೀಡಿದರು.

ಪಿಎಸ್‌ ಐ ನೇಮಕಾತಿ ಅಕ್ರಮದಲ್ಲಿ ಸಚಿವರ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಅಶ್ವಥ್‌ ನಾರಾಯಣ್‌ ಮೇಲಿನ ಆರೋಪ ಸುಳ್ಳು ಅನ್ನಿಸುತ್ತೆ. ಅವರಿಗೆ ಯಾವುದೇ ತೊಂದರೆ ಆಗಲ್ಲ ಬಿಡಿ ಎಂದು ಯತ್ನಾಳ್‌ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಿರ್ದೇಶಕರಿಂದಲೇ ನನ್ನ ಸಿನಿಮಾ ಜರ್ನಿ ಹಾಳಾಯ್ತು: ಬಾಲಿವುಡ್​ನ ಮತ್ತೊಂದು ಕರಾಳತೆ ಬಿಚ್ಚಿಟ್ಟ ನಟ ಅಭಯ್​ ಡಿಯೋಲ್​

Sat May 7 , 2022
  ಮುಂಬೈ: ಬಾಲಿವುಡ್​ನ ಮತ್ತೊಂದು ಕರಾಳ ಮುಖವನ್ನು ನಟ ಹಾಗೂ ನಿರ್ಮಾಪಕ ಅಭಯ್​ ಡಿಯೋಲ್​ ಅವರೇ ಬಿಚ್ಚಿಟ್ಟಿದ್ದಾರೆ. ನಟಿ ಕಂಗನಾ ರಣಾವತ್ ಅವರು ಆಗ್ಗಾಗ್ಗೆ ಬಾಲಿವುಡ್​ ಬಗ್ಗೆ ಕಿಡಿಕಾರಿ ಆರೋಪ ಹೊರಿಸುವುದು ಸಾಮಾನ್ಯ ಆದರೀಗ ಈ ಸಾಲಿಗೆ ಅಭಯ್ ಡಿಯೋಲ್​ ಕೂಡ ಸೇರಿದ್ದಾರೆ. ನಿರ್ದೇಶಕರ ಬಗ್ಗೆ ನನಗೆ ಗಾಬರಿಯಾಗುತ್ತದೆ. ಜೀವನದಲ್ಲಿ ಮುಂದೆ ಬರಲು ನನ್ನನ್ನು ಹಲವರು ಬಳಸಿಕೊಂಡಿದ್ದಾರೆ. ಇವರಿಂದಲೇ ನನ್ನ ಸಿನಿಮಾ ಜೀವನ ಹಾಳಾಯಿತು ಎಂದು ಅಸಮಾಧಾನ ಹೊರಹಾಕಿದ್ದಾರೆ. ಒಳ್ಳೆಯತನ […]

Advertisement

Wordpress Social Share Plugin powered by Ultimatelysocial