ಬಿಜೆಪಿಗೆ ಬಂದ 17 ಶಾಸಕರ ಬಗ್ಗೆ ಬಿಗ್ ಶಾಕ್ ಕೊಟ್ಟ ಯಡಿಯೂರಪ್ಪ!

ಬಿಜೆಪಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ 17 ಜನ ಶಾಸಕರ ಕುರಿತಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆ ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಸಂಪುಟ ವಿಸ್ತರಣೆ ಕುರಿತಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕೇಂದ್ರದ ನಾಯಕರು ಇನ್ನೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ.

ವಿಜಯೇಂದ್ರ ಸಂಪುಟ ಸೇರ್ಪಡೆ ಕುರಿತು ನನಗೆ ಗೊತ್ತಿಲ್ಲ ಎಂದು ಹೇಳಿದರು.

ಇದೇ ವೇಳೆ, ಕಾಂಗ್ರೆಸ್, ಜೆಡಿಎಸ್ 17 ಶಾಸಕರು ಬಿಜೆಪಿಯಲ್ಲೇ ಉಳಿಯುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ.

ಈಗಾಗಲೇ ಸಚಿವ ಸಂಪುಟದ ಕುರಿತು ಸ್ಪಷ್ಟ ಸೂಚನೆ ನೀಡಲು ಹೈಕಮಾಂಡ್ ಹಿಂದೇಟು ಹಾಕುತ್ತಿದೆ. ಮತ್ತೊಂದೆಡೆ ಪಕ್ಷೇತರ ಶಾಸಕ ನಾಗೇಶ್ ಕಾಂಗ್ರೆಸ್ ಕದ ತಟ್ಟಿದ್ದಾರೆ. ಸಚಿವ ಎಂಬಿಟಿ ನಾಗರಾಜ್ ಕೂಡ ಬಿಜೆಪಿಗೆ ಬಂದು ತಪ್ಪು ಮಾಡಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದೆಲ್ಲದರ ನಡುವೆ ಯಡಿಯೂರಪ್ಪ ಹೇಳಿಕೆ ಭಾರಿ ಮಹತ್ವ ಪಡೆದುಕೊಂಡಿದೆ.

ಈ ಮುಂಚೆ 17 ಶಾಸಕರ ಪರವಾಗಿ ಯಡಿಯೂರಪ್ಪ ಬ್ಯಾಟಿಂಗ್ ಮಾಡುತ್ತಿದ್ದರು. ‌ಆದರೀಗ ಈ ರೀತಿ ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಕೆಜಿಎಫ್ 2' 28ನೇ ದಿನ ಕಲೆಕ್ಷನ್: ರಾಕಿಬಾಯ್‌ಗೆ ಮಹೇಶ್‌ ಬಾಬು ಟಕ್ಕರ್!

Thu May 12 , 2022
ಯಾವುದೇ ಸಿನಿಮಾ ಬಿಡುಗಡೆಯಾದ ಒಂದು ವಾರ ಬಾಕ್ಸಾಫೀಸ್‌ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತೆ. ಆ ಬಳಿಕ ವೀಕೆಂಡ್‌ನಲ್ಲಿ ಮಾತ್ರ ಸಿನಿಮಾಗಳಿಗೆ ಕಲೆಕ್ಷನ್ ಇರುತ್ತೆ. ಆದರೆ ‘ಕೆಜಿಎಫ್ 2’ ವಿಷಯದಲ್ಲಿ ಹಾಗಾಗಿಲ್ಲ. ಕಳೆದ 25 ದಿನಗಳಿಂದ ಈ ಸಿನಿಮಾ ಬಾಕ್ಸಾಫೀಸ್‌ನಿಂದ ಜಗ್ಗಲೇ ಇಲ್ಲ. ಪ್ರತಿ ದಿನವೊ ಒಂದೊಂದು ಸರ್ಪ್ರೈಸ್ ನೀಡುತ್ತಲೇ ಮುನ್ನುಗುತ್ತಿದೆ. ಬಾಲಿವುಡ್, ಸ್ಯಾಂಡಲ್‌ವುಡ್,‌ ಕಾಲಿವುಡ್, ಟಾಲಿವುಡ್ ಅಷ್ಟೆ ಯಾಕೆ ಮಾಲಿವುಡ್‌ನಲ್ಲೂ ‘ಕೆಜಿಎಫ್ 2’ ದಾಖಲೆ ಬರೆಯುತ್ತಿದ್ದೆ. ತಮಿಳುನಾಡಿನಲ್ಲಿ ‘ಕೆಜಿಎಫ್ 2’ ಸಿನಿಮಾ […]

Advertisement

Wordpress Social Share Plugin powered by Ultimatelysocial