ಧರ್ಮ ದಂಗಲ್‌ ವಿರುದ್ಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿಕಾರಿದ್ದು,

ಬೆಂಗಳೂರು : ಧರ್ಮ ದಂಗಲ್‌ ವಿರುದ್ಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿಕಾರಿದ್ದು, ಎಲ್ಲವನ್ನೂ ಇಲ್ಲಿಗೆ ಬಿಟ್ಟು, ನಿಮ್ಮ ಕೆಲಸ ನೀವು ಮಾಡಿ. ಇಲ್ಲವಾದ್ರೆ, ಸರ್ಕಾರದಿಂದ ಕಠಿಣ ಕ್ರಮ ಖಂಡಿತ ಎಂದಿದ್ದಾರೆ.

‘ನಾನು ಒಂದೇ ಮಾತಲ್ಲಿ ಹೇಳಬೇಕು ಅಂದ್ರೆ ಹಿಂದೂ ಮುಸ್ಲಿಂ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಅನ್ನೋದು ಎಲ್ಲರ ಅಪೇಕ್ಷೆ.

ಯಾರೋ ಕಿಡಿಗೇಡಿಗಳು ಇದನ್ನು ಅಡ್ಡಿ ಮಾಡುವಂತ ಪ್ರಯತ್ನ ಮಾಡಿದ್ರೆ, ಈಗಾಗಲೇ ಮುಖ್ಯಮಂತ್ರಿಗಳು ಹೇಳಿದಂತೆ ಅಂಥವರ ಮೇಲೆ ಕಾನೂನಿನ ಕ್ರಮ ತೆಗೆದಕೊಳ್ಳುತ್ತೇವೆ. ಇನ್ನು ಮುಂದೆಯಾದರು ಅಹಿತಕರ ಘಟನೆ ನಡೆಯದಂತೆ ಒಟ್ಟಾಗಿ ಬಾಳುವುದಕ್ಕೆ ಅವಕಾಶ ಮಾಡಿಕೊಡಬೇಕು’ ಎಂದರು.

ಇನ್ನು ಇಂತಹ ಘಟನೆಗಳನ್ನ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಈಗಾಗಲೇ ಸಿಎಂ ಎಚ್ಚರಿಕೆ ಕೊಟ್ಟಿದ್ದಾರೆ. ನಾನು ಕೂಡ ಕಿವಿ ಮಾತ್ತೊಂದನ್ನ ಹೇಳ್ತೀನಿ. ‘ಇಲ್ಲಿಗೆ ಎಲ್ಲವನ್ನ ನಿಲ್ಲಿಸಿ ನಿಮ್ ನಿಮ್ಮ ಕೆಲಸ ಮಾಡಿ. ಅವರು ಸಹ ಗೌರವ, ನೆಮ್ಮದಿಯಿಂದ ಬದುಕಬೇಕಾಗುತ್ತದೆ’ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಮನೆಗಳ್ಳನನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

Mon Apr 11 , 2022
  ಬೆಂಗಳೂರು: ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಮನೆಗಳ್ಳನನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಕ್ರಂ ನಜೀರ್ ಪಾಷಾ ಬಂಧಿತ ಆರೋಪಿ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬೀಗ ಮುರಿದು ಕೈ ಚಳಕ ತೋರಿಸುತ್ತಿದ್ದ. ಕದ್ದ ಚಿನ್ನವನ್ನು ಮಾರಲು ಯತ್ನಿಸಿದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ಬಾರಿ ಬಾಡಿಗೆಗಿದ್ದ ತನ್ನ ಮೇಲಿನ ಮನೆಗೆ ಕನ್ನ ಹಾಕಿದ್ದ. ಯಾಸ್ಮಿನ್​ ಎಂಬುವರ ಮನೆಯಲ್ಲಿ 9 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ. ಈ ಬಗ್ಗೆ ಕೆ.ಜಿ.ಹಳ್ಳಿ ಠಾಣೆಯಲ್ಲಿ […]

Advertisement

Wordpress Social Share Plugin powered by Ultimatelysocial