ಶಿವರಾಜ್ ಕುಮಾರ್ ತಮ್ಮ 125ನೇ ಚಿತ್ರವಾದ ವೇದ ಎರಡನೇ ಶೆಡ್ಯೂಲ್ ನಲ್ಲಿ ಬ್ಯುಸಿಯಾಗಿದ್ದಾರೆ. ಎ ಹರ್ಷ ನಿರ್ದೇಶನದ ವೇದ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ.
ಸೆಂಚ್ಯುರಿ ಸ್ಟಾರ್ ಯೋಗರಾಜ್ ಭಟ್ ಅವರೊಂದಿಗೆ ಮತ್ತೊಂದು ಸಿನಿಮಾ ಪ್ರಾರಂಭಿಸಲಿದ್ದಾರೆ.
ಈ ಸಿನಿಮಾದಲ್ಲಿ ಪ್ರಭುದೇವ ಮಹತ್ವದ ಪಾತ್ರದಲ್ಲಿ ನಟಿಸಲಿದ್ದಾರೆ. ಯೋಗರಾಜ್ ಭಟ್ ಅಸಾಮಾನ್ಯ ಕಥೆ ಬರೆದಿದ್ದಾರೆ. ಪ್ರಭುದೇವ ಮತ್ತು ನನಗೆ ಇಬ್ಬರಿಗೂ ಮಹತ್ವದ ಹಾಗೂ ಪಾತ್ರ ಬರೆದಿದ್ದಾರೆ.
ಭಾವನಾತ್ಮಕ ಅಂಶವು ಇಡೀ ಚಿತ್ರಕ್ಕೆ ಹೆಚ್ಚಿನ ತೂಕವನ್ನು ನೀಡುತ್ತದೆ. ಪ್ರಭುದೇವ ಕೂಡ ಸ್ಕ್ರಿಪ್ಟ್ ಕೇಳಿದ್ದಾರೆ ಮತ್ತು ಅವರು ಅದನ್ನು ಇಷ್ಟಪಟ್ಟಿದ್ದಾರೆ ಎಂದು ಶಿವಣ್ಣ ಅವರು ನಮ್ಮ ಹಿಂದಿನ ಸಂದರ್ಶನದಲ್ಲಿ ಹೇಳಿದ್ದರು.
ಚಿತ್ರವು ಮೇ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ. ನೀ ಸಿಗುವರೆಗು, ನಿರ್ದೇಶಕ ರಿಷಬ್ ಶೆಟ್ಟಿ ಜೊತೆಗಿನ ಪ್ರಾಜೆಕ್ಟ್ ಮತ್ತು ಲೋಹಿತ್ ಹೆಚ್ ಅವರ ಸತ್ಯಮಂಗಲದಂತಹ ಚಿತ್ರಗಳನ್ನು ಶಿವರಾಜ್ ಕುಮಾರ್ ನಟಿಸುತ್ತಿದ್ದಾರೆ.
ಸದ್ಯ ಗಾಳಿಪಟ 2 ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಯೋಗರಾಜ್ ಭಟ್ ಶೀಘ್ರದಲ್ಲೇ ತಮ್ಮ ಮುಂದಿನ ಗರಡಿ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ. ಚಿತ್ರದಲ್ಲಿ ಯಶಸ್ ಸೂರ್ಯ ನಟಿಸುತ್ತಿದ್ದು, ನಟ ದರ್ಶನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada