ರಾಸಲೀಲೆ ಬಗ್ಗೆ ಕುಮಾರಸ್ವಾಮಿ ಅವರನ್ನೇ ಕೇಳಿ, ಅವರು ಹೇಳಿಲ್ಲ ಅಂದ್ರೆ ನಾನೇ ಹೇಳ್ತೀನಿ… ಎಂದು ಯೋಗೇಶ್ವರ್ ಹೇಳಿದ್ದಾರೆ.
ಸೋಮವಾರ ಚನ್ನಪಟ್ಟಣ ತಾಲೂಕಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಯೋಗೇಶ್ವರ್, ನನ್ನಿಂದ ಯಾಕಪ್ಪ ಎಚ್ಡಿಕೆ ಆಣಿಮುತ್ತುಗಳನ್ನು ಕೇಳ್ತೀರಾ? ನೇರಾ-ನೇರಾ ನನ್ನ ಮುಂದೆ ಕೂರಿಸಿ. ವೈಯಕ್ತಿಕ ಹಾಗೂ ಸಾರ್ವಜನಿಕ ವಿಚಾರಗಳನ್ನು ಬಹಿರಂಗವಾಗಿ ಮಾತಾಡೋಣ. 14 ತಿಂಗಳು ಸಿಎಂ ಆಗಿದ್ದ ವೇಳೆ ಚನ್ನಪಟ್ಟಣಕ್ಕೆ ಎಚ್ಡಿಕೆ ಬರ್ತಿರಲಿಲ್ಲ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ರಾಸಲೀಲೆ ಆಡಿಕೊಂಡಿದ್ರು. ಇದೀಗ ಚನ್ನಪಟ್ಟಣ ತಾಲೂಕಿಗೆ ಬಂದು ಜನರ ಮುಂದೆ ಕಣ್ಣೀರಿಟ್ಟು ನಾಟಕ ಮಾಡ್ತಿದ್ದಾರೆ. ರಾಸಲೀಲೆ ಬಗ್ಗೆ ಕುಮಾರಸ್ವಾಮಿ ಅವರನ್ನು ಕೇಳಿ, ಅವರು ಹೇಳಿಲ್ಲ ಅಂದ್ರೆ ನಾನೇ ಹೇಳ್ತೀನಿ. ಎಚ್ಡಿಕೆ ಬಹಿರಂಗ ಚರ್ಚೆಗೆ ಬರಲಿ, ನಾನೂ ಸಿದ್ಧನಿದ್ದೇನೆ. ನನ್ನ ಬಗ್ಗೆ ಏಕವಚನದಲ್ಲಿ ಮಾತಾಡಿದ್ರೆ, ನಾನೂ ಕೂಡ ಏಕವಚನದಲ್ಲೇ ಮಾತಾಡ್ತೀನಿ ಎಂದು ಕಿಡಿಕಾರಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: