ಆ ಹೋಟೆಲ್​ನಲ್ಲಿ ಎಚ್​ಡಿಕೆ ರಾಸಲೀಲೆ ಆಡಿಕೊಂಡಿದ್ರು. ವಿವಾದದ ಕಿಡಿ ಹೊತ್ತಿಸಿದ ಯೋಗೇಶ್ವರ್​

ರಾಮನಗರ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪದೇಪದೆ ವಾಗ್ದಾಳಿ ನಡೆಸುತ್ತಿರುವ ಎಂಎಲ್​ಸಿ ಸಿ.ಪಿ.ಯೋಗೇಶ್ವರ್​, ಇದೀಗ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿ 14 ತಿಂಗಳು ಸಿಎಂ ಆಗಿದ್ದ ವೇಳೆ ರಾಸಲೀಲೆ ಆಡಿಕೊಂಡಿದ್ದರು.

 

ರಾಸಲೀಲೆ ಬಗ್ಗೆ ಕುಮಾರಸ್ವಾಮಿ ಅವರನ್ನೇ ಕೇಳಿ, ಅವರು ಹೇಳಿಲ್ಲ ಅಂದ್ರೆ ನಾನೇ ಹೇಳ್ತೀನಿ… ಎಂದು ಯೋಗೇಶ್ವರ್​ ಹೇಳಿದ್ದಾರೆ.

ಸೋಮವಾರ ಚನ್ನಪಟ್ಟಣ ತಾಲೂಕಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಯೋಗೇಶ್ವರ್​, ನನ್ನಿಂದ ಯಾಕಪ್ಪ ಎಚ್​ಡಿಕೆ ಆಣಿಮುತ್ತುಗಳನ್ನು ಕೇಳ್ತೀರಾ? ನೇರಾ-ನೇರಾ ನನ್ನ ಮುಂದೆ ಕೂರಿಸಿ. ವೈಯಕ್ತಿಕ ಹಾಗೂ ಸಾರ್ವಜನಿಕ ವಿಚಾರಗಳನ್ನು ಬಹಿರಂಗವಾಗಿ ಮಾತಾಡೋಣ. 14 ತಿಂಗಳು‌ ಸಿಎಂ ಆಗಿದ್ದ ವೇಳೆ ಚನ್ನಪಟ್ಟಣಕ್ಕೆ ಎಚ್​ಡಿಕೆ ಬರ್ತಿರಲಿಲ್ಲ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ರಾಸಲೀಲೆ ಆಡಿಕೊಂಡಿದ್ರು. ಇದೀಗ ಚನ್ನಪಟ್ಟಣ ತಾಲೂಕಿಗೆ ಬಂದು ಜನರ ಮುಂದೆ ಕಣ್ಣೀರಿಟ್ಟು ನಾಟಕ ಮಾಡ್ತಿದ್ದಾರೆ. ರಾಸಲೀಲೆ ಬಗ್ಗೆ ಕುಮಾರಸ್ವಾಮಿ ಅವರನ್ನು ಕೇಳಿ, ಅವರು ಹೇಳಿಲ್ಲ ಅಂದ್ರೆ ನಾನೇ ಹೇಳ್ತೀನಿ. ಎಚ್​ಡಿಕೆ ಬಹಿರಂಗ ಚರ್ಚೆಗೆ ಬರಲಿ, ನಾನೂ ಸಿದ್ಧನಿದ್ದೇನೆ. ನನ್ನ ಬಗ್ಗೆ ಏಕವಚನದಲ್ಲಿ ಮಾತಾಡಿದ್ರೆ, ನಾನೂ ಕೂಡ ಏಕವಚನದಲ್ಲೇ ಮಾತಾಡ್ತೀನಿ ಎಂದು ಕಿಡಿಕಾರಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

COVID:ಭಾರತದಲ್ಲಿ 2,503 ಹೊಸ ಕೋವಿಡ್ ಪ್ರಕರಣಗಳು, ಸುಮಾರು 2 ವರ್ಷಗಳಲ್ಲಿ ಕಡಿಮೆ ಏಕದಿನ ಏರಿಕೆ!

Mon Mar 14 , 2022
ಭಾರತವು ಸೋಮವಾರ 2,503 ಹೊಸ ಸೋಂಕುಗಳೊಂದಿಗೆ ಕೋವಿಡ್ ಪ್ರಕರಣಗಳಲ್ಲಿ ದೈನಂದಿನ ಏರಿಕೆಯಲ್ಲಿ ಇಳಿಕೆಯನ್ನು ಕಂಡಿದೆ, ಇದು 680 ದಿನಗಳಲ್ಲಿ ಕಡಿಮೆ ಏಕದಿನ ಏರಿಕೆಯಾಗಿದೆ. ತಾಜಾ ಉಲ್ಬಣವು ಒಟ್ಟಾರೆ ಕ್ಯಾಸೆಲೋಡ್ ಅನ್ನು 4,29,93,494 ಕ್ಕೆ ತೆಗೆದುಕೊಳ್ಳುತ್ತದೆ. ಕಳೆದ 24 ಗಂಟೆಗಳಲ್ಲಿ ಇಪ್ಪತ್ತೇಳು ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು 4,377 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಸರ್ಕಾರದ ಇತ್ತೀಚಿನ ಮಾಹಿತಿ ತೋರಿಸುತ್ತದೆ. ಇದರೊಂದಿಗೆ ಒಟ್ಟಾರೆ ಸಾವಿನ ಸಂಖ್ಯೆ ಮತ್ತು ಚೇತರಿಕೆ ಕ್ರಮವಾಗಿ 5,15,877 ಮತ್ತು 4,24,41,449 […]

Advertisement

Wordpress Social Share Plugin powered by Ultimatelysocial