ರಾಯ್ಪುರ್ (ಛತ್ತೀಸ್ಗಢ): ಭಾರತ ದೇಶವನ್ನು ಹಾಳು ಮಾಡಿದವರೇ ಗಾಂಧಿ. 1947ರಲ್ಲಿ ದೇಶ ವಿಭಜನೆಯಾಗಲು ಅವರೇ ಕಾರಣ, ಇಲ್ಲದಿದ್ದರೆ ದೇಶ ಸುಭೀಕ್ಷವಾಗಿರುತ್ತಿತ್ತು ಎನ್ನುವ ಮೂಲಕ ಗಾಂಧಿಯನ್ನು ನಿಂದಿಸಿ, ಅವರ ಹಂತಕ ನಾಥೂರಾಮ್ ಗೊಡ್ಸೆಯನ್ನು ಮಹಾರಾಷ್ಟ್ರದ ಸಂತ ಕಾಲಿಚರಣ್ ಹಾಡಿ ಹೊಗಳಿರುವ ಘಟನೆ ರಾಯ್ಪುರದಲ್ಲಿ ನಡೆದ ಧರ್ಮ ಸಂಸತ್ತಿನಲ್ಲಿ ನಡೆದಿದೆ.
ಗಾಂಧಿ ದೇಶವನ್ನು ಸತ್ಯನಾಶ ಮಾಡಿದರು. ಅವರನ್ನು ಕೊಂದ ಗೋಡ್ಸೆಗೆ ನಾನು ದೊಡ್ಡ ನಮಸ್ಕಾರ ಮಾಡುತ್ತೇನೆ ಎಂದರು. ಇದರ ಜತೆಗೆ, ‘ದೇಶದ ಆಡಳಿತದ ಚುಕ್ಕಾಣಿ ಹಿಡಿಯುವ ವ್ಯಕ್ತಿ ಕಟ್ಟಾ ಹಿಂದೂ ಧರ್ಮೀಯನೇ ಆಗಿರಬೇಕು, ಶಾಸಕ, ಸಂಸದ ಎಲ್ಲರೂ ಹಿಂದೂ ಧರ್ಮಿಯಾಗಿರಬೇಕು. ದೇಶದಲ್ಲಿ ಯಾರು ಮತ ಚಲಾಯಿಸುವುದಿಲ್ಲವೋ ಅಂಥವರು ಪರೋಕ್ಷವಾಗಿ ಇಸ್ಲಾಂಗೆ ಬೆಂಬಲ ನೀಡಿದ ಹಾಗೆಯೇ ಆಗುತ್ತದೆ. ಈ ಮೂಲಕ ಇಸ್ಲಾಂ ಪ್ರಬಲಗೊಳ್ಳಲು ದಾರಿ ಮಾಡಿ ಕೊಡುತ್ತೀರಿ ಎಂದು ಹೇಳಿದರು.
ಈ ಮಾತು ಇಡೀ ಸಭೆಯಲ್ಲಿ ಭಾರಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿ, ಭಾರಿ ವಿವಾದದ ಅಲೆಯನ್ನೂ ಹುಟ್ಟುಹಾಕಿದೆ. ಈ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯ ಗೋಸೇವಾ ಆಯೋಗದ ಅಧ್ಯಕ್ಷರಾದ ಮಹಾಂತ್ ರಾಮಸುಂದರ್ ದಾಸ್ ವೇದಿಕೆ ಬಿಟ್ಟು ಹೋದ ಘಟನೆಯೂ ನಡೆಯಿತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: