ಯುವ ಮಹಿಳಾ ಉದ್ಯಮಿ ಪಂಖೂರಿ ಶ್ರೀ ವಾಸ್ತವ ಇನ್ನಿಲ್ಲ;

ನವದೆಹಲಿ: ಭಾರತದ ಮಹಿಳಾ ಯುವ ಉದ್ಯಮಿ ಹಾಗೂ ಮಹಿಳಾ ಕೇಂದ್ರಿತ ಸಾಮಾಜಿಕ ಉದ್ಯಮದ ಸಂಸ್ಥಾಪಕಿ ಪಂಖೂರಿ ಶ್ರೀವಾಸ್ತವ ಅವರು ಹೃದಯ ಸ್ತಂಭನದಿಂದ (ಕಾರ್ಡಿಯಾಕ್‌ ಅರೆಸ್ಟ್) ಮೃತಪಟ್ಟಿದ್ದಾರೆ ಎಂದು ಕಂಪನಿ ಮೂಲಗಳು ತಿಳಿಸಿವೆ.

32 ವರ್ಷ ವಯಸ್ಸಿನ ಪಂಖೂರಿ ಅವರು ಡಿ.24ರಂದು ಹೃದಯ ಸ್ತಂಭನದಿಂದ ನಿಧನರಾದರು.

ಸಿಇಒ ಪಂಖೂರಿ ಇನ್ನಿಲ್ಲ ಎನ್ನುವ ದುಃಖ ನಮ್ಮನ್ನು ಆವರಿಸಿದೆ ಎಂದು ಪಂಖೂರಿ ಅವರ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಂತಾಪ ಸೂಚಿಸಿ ಟ್ವೀಟ್‌ ಮಾಡಲಾಗಿದೆ.

ಭಾರತದ ಮಹಿಳೆಯರು ಲೈವ್‌ ಸ್ಟ್ರೀಮಿಂಗ್‌, ಚಾಟ್‌ ಮತ್ತು ಮೈಕ್ರೋ-ಕೋರ್ಸ್‌ಗಳ ಮೂಲಕ ಆನ್‌ಲೈನ್‌ ಶಾಪಿಂಗ್‌ ಮಾಡಲು ಪಂಖೂರಿ ಅವರ ಸಿಕ್ವೊಯಾ ಕ್ಯಾಪಿಟಲ್-ಬೆಂಬಲಿತ ಸಾಮಾಜಿಕ ಸಮುದಾಯವು ವೇದಿಕೆಯಾಗಿದೆ.

ಪಂಖೂರಿ ಅವರು 2016ರಲ್ಲಿ ಆನ್‌ಲೈನ್‌ ಜಾಹೀರಾತು ಕಂಪನಿ ಕ್ವಿಕರ್‌ ಅನ್ನು ಸ್ವಾಧೀನಪಡಿಸಿಕೊಂಡು ರೀಟೈಲ್‌ ಸ್ಟಾರ್ಟ್‌-ಅಪ್‌ ಗ್ರಾಬ್‌ ಹೌಸ್‌ ಸ್ಥಾಪಿಸಿದ್ದರು.

ಪಂಖೂರಿ ಅವರು, ಝಾನ್ಸಿ ಮೂಲದವರು. ರಾಜೀವ್‌ ಗಾಂಧಿ ತಾಂತ್ರಿಕ ವಿವಿಯಲ್ಲಿ ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ ಪದವಿ ಪಡೆದಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ರಾಹುಲ್ ಗಾಂಧಿ ನೇತೃತ್ವದಲ್ಲಿ ಚುನಾವಣೆಗೆ ಹೋದ್ರೆ ಕಾಂಗ್ರೆಸ್ ಸಿಂಗಲ್ ಡಿಜಿಟ್​ಗೆ ಬರುತ್ತೆ: ಸಿಟಿ ರವಿ ವ್ಯಂಗ್ಯ

Wed Dec 29 , 2021
ಮುಂಬರುವ ಮೂರು ತಿಂಗಳ ಅವದಿಯಲ್ಲಿ ಪಕ್ಷ ಸಂಘಟನೆಯನ್ನ ಮಾಡಬೇಕಿದೆ. 11 ಜನ ಎಂಎಲ್​ಸಿ, ಓರ್ವ ಶಾಸಕರಿಗೆ ಸತ್ಕಾರ ಮಾಡಲಾಗಿದೆ ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.ಹುಬ್ಬಳ್ಳಿ: ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಎಂಎಲ್​ಸಿ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು. ಕಾಮನ್ ಮ್ಯಾನ್ ಆಗಿ ಕೆಲಸ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಳಿದ್ದಾರೆ. ಕರ್ನಾಟಕ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​​ ಸಿಂಗ್ […]

Advertisement

Wordpress Social Share Plugin powered by Ultimatelysocial