ಸೌಂದರ್ಯ ಕಾಣದಿರಲು ಹಾಗೂ ತಮ್ಮ ರಕ್ಷಣೆಗಾಗಿ ಹಿಜಾಬ್‍ ಧರಿಸುತ್ತಾರೆ

ಹುಬ್ಬಳ್ಳಿ: ಸೌಂದರ್ಯ ಕಾಣದಿರಲು ಹಾಗೂ ತಮ್ಮ ರಕ್ಷಣೆಗಾಗಿ ಹಿಜಾಬ್‍ ಧರಿಸುತ್ತಾರೆ ಎಂದಿದ್ದೆ. ಈ ನನ್ನ ಹೇಳಿಕೆಯನ್ನು ತಪ್ಪಾಗಿ ತಿಳಿದುಕೊಂಡು ಗೊಂದಲ ಸೃಷ್ಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಜಮೀರ ಅಹ್ಮದ್ ತಿಳಿಸಿದರು.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಜಾಬ್ ಹಾಕದಿದ್ದರೆ ರೇಪ್ ಆಗುತ್ತದೆಂದು ಹೇಳಿಲ್ಲ.ಬೇರೆಯವರು ಗೊಂದಲ ಸೃಷ್ಟಿ ಮಾಡಿಕೊಂಡರೆ ನಾನು ಏನು ಮಾಡಲಿ? ಹಿಜಾಬ್ ಹಾಕಿದರೆ ಬ್ಯೂಟಿ ಕಾಣಲ್ಲ, ಸುರಕ್ಷತೆಗಾಗಿ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆ. ಬೇರೆಯವರ ಕಣ್ಣು ಬೀಳಬಾರದು ಎಂದು ತಲೆ ಮತ್ತು ಮುಖ ಮುಚ್ಚಿಕೊಳ್ಳುತ್ತಾರೆ ಅಷ್ಟೇ ಎಂದರು.ನಮ್ಮಲ್ಲಿ ರೇಪ್ ರೇಟ್ ಜಾಸ್ತಿ ಇದೆ. ಈ ಹೇಳಿಕೆ ತಪ್ಪಾಗಿ ತಿಳಿದುಕೊಂಡು ಗೊಂದಲ ಸೃಷ್ಟಿ ಮಾಡಿಕೊಳ್ಳಲಾಗಿದೆ. ಕೆಲವರು ಹಿಜಾಬ್ ಹಾಕುತ್ತಾರೆ, ಕೆಲವರು ಹಾಕಲ್ಲ. ಇಸ್ಲಾಂನಲ್ಲಿ ಹಿಜಾಬ್ ಹಾಕಬೇಕು ಎಂದು ಇದೆ ಎಂದು ತಿಳಿಸಿದರು.ದೇಶದಲ್ಲಿ ರೇಪ್ ರೇಟ್ ಜಾಸ್ತಿ ಇದೆ. ಬೇರೆ ದೇಶಕ್ಕೆ ಹೋಲಿಸಿದರೆ ನಮ್ಮಲ್ಲಿ ಜಾಸ್ತಿ ಇದೆ. ಹಿಜಾಬ್ ಧರಿಸುವುದರಿಂದ ಏನು ಎಂದು ಹೇಳಿದ್ದೇನೆ ಅಷ್ಟೇ. ಉದಾಹರಣೆಗೆ ಹೆಲ್ಮೆಟ್ ಹಾಕಿಕೊಳ್ಳೊದು ಸೇಫ್ಟಿಗಾಗಿ ಅಲ್ಲವೇ. ಹೆಲ್ಮೆಟ್ ಹಾಕಲು ಸರಕಾರ ಆದೇಶ ಮಾಡಿದೆ. ನ್ಯಾಯಾಲಯದಲ್ಲಿ ಹಿಜಾಬ್ ಆದೇಶಕ್ಕೆ ತಲೆ ಬಾಗುತ್ತೇವೆ. ಅದಕ್ಕೆ ಸ್ವಾಗತ ಮಾಡುತ್ತೇವೆ ಎಂದರು.ಸಿಎಂ ಇಬ್ರಾಹಿಂ ಪಕ್ಷ ಬಿಡಲ್ಲ ಎಂದು ನಿನ್ನೆಯೇ ಹೇಳಿದ್ದೆ. ಅವರ ಹಾಗೂ ಸಿದ್ದರಾಮಯ್ಯನವರ ಸಂಬಂಧ ಹಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಕ್ಕಳ ಹೃದಯದಲ್ಲಿ ವಿಷ ತುಂಬುವ ಕೆಲಸವನ್ನು ಕೆಲವರು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ.

Mon Feb 14 , 2022
ಹಾಸನ: ಹಿಜಾಬ್ ವಿಚಾರದಲ್ಲಿ   ನ್ಯಾಯಾಲಯದ ತೀರ್ಪು ಏನು ಬರುತ್ತದೋ ನೋಡೋಣ. ಆದರೆ, ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಹೃದಯದಲ್ಲಿ ವಿಷ ತುಂಬುವ ಕೆಲಸವನ್ನು ಕೆಲವರು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ. ಇದರಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಕುತಂತ್ರವೂ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ  ಅವರು ಆಕ್ರೋಶ ವ್ಯಕ್ತಪಡಿಸಿದರು.ಖಾಸಗಿ ಕಾರ್ಯಕ್ರಮದ ನಿಮಿತ್ತ ಹಾಸನಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳ ಮಾತನಾಡಿ ಮಾಜಿ ಮುಖ್ಯಮಂತ್ರಿಗಳು; ‘ಸಣ್ಣ ಪ್ರಮಾಣದಲ್ಲಿದ್ದ ಹಿಜಾಬ್ ವಿವಾದವನ್ನು ದೊಡ್ಡದು ಮಾಡಿದ್ದಾರೆ. ಇದರಲ್ಲಿ ಎಲ್ಲಾ […]

Advertisement

Wordpress Social Share Plugin powered by Ultimatelysocial