ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ಮುಂದುವರಿದಿದೆ. ಬುಧವಾರ ರಾತ್ರಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಭೇಟಿಯಾಗಿದ್ದ ಜಮೀರ್ ಅಹಮದ್ ಕೈ ನಾಯಕರ ವಿರುದ್ಧದ ತನ್ನ ಅಸಮಾಧಾನವನ್ನು ತೋಡಿಕೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್ ನಾಯಕರಿಂದ ಅಂತರ ಕಾಯ್ದುಕೊಂಡಿರುವ ಜಮೀರ್, ಕೆಪಿಸಿಸಿ ಕಚೇರಿಯಲ್ಲಿ ಕರೆದ ಸಭೆಗಳಿಗೆ ಹಾಜರಾಗಿಲ್ಲ. ಬುಧವಾರ ರಾತ್ರಿ ಖಾಸಗಿ ಹೋಟೆಲ್’ನಲ್ಲಿ ಸುರ್ಜೆವಾಲರನ್ನು ಭೇಟಿ ಮಾಡಿದ್ದಾರೆ.
ಭೇಟಿ ವೇಳೆಯ ವೇಳೆ ಮುಸ್ಲಿಂ ಸಮುದಾಯದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಯಾರೂ ಧ್ವನಿ ಎತ್ತುತ್ತಿಲ್ಲ ಎಂದು ಅಸಮಧಾನ ತೋಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada