ಪಟ್ಟಣದ ಹುಲ್ಲಹಳ್ಳಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಶಾಸಕ ಜಮೀರ್ ಅಹ್ಮದ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು
ಒಕ್ಕಲಿಗ ಸಮುದಾಯದ ವಿರುದ್ಧ ಹಗುರವಾಗಿ ಮಾತನಾಡಿರುವ ಶಾಸಕ ಜಮೀರ್ ಅಹ್ಮದ್ ಅನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮುಖಂಡರು ಅಗ್ರಹ ಪಡಿಸಿದರು
ಜಮೀರ್ ಅಹ್ಮದ್ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಒಡೆದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನೆಕಾರರು ಅವರ ಭಾವಚಿತ್ರದ ಪ್ರತಿಯನ್ನು ಸುಟ್ಟು ಹಾಕಿದರು
ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ ಪರಿಣಾಮ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು
ಬಳಿಕ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ನರಸಿಂಹಸ್ವಾಮಿ ಖಾದಿ ಗ್ರಾಮೋದ್ಯೋಗ ಮಂಡಳಿ ರಾಜ್ಯಾಧ್ಯಕ್ಷ ಕೃಷ್ಣಪ್ಪಗೌಡ ಹಾಗೂ ಕ ರ ವೇ ಜಿಲ್ಲಾಧ್ಯಕ್ಷ ಪ್ರವೀಣ್ ಮಾತನಾಡಿ ಶಾಸಕ ಜಮೀರ್ ಅಹ್ಮದ್ ನಡೆಯನ್ನು ತೀವ್ರವಾಗಿ ಖಂಡಿಸಿ ದರು ಕೂಡಲೇ ಅವನನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಇಲ್ಲ ಕ್ಷಮಾಪಣೆ ಕೇಳಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಸಮುದಾಯದ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು
ಪ್ರತಿಭಟನೆಯಲ್ಲಿ ಪಕ್ಷಾತೀತವಾಗಿ ಸಮಾಜದ ಮುಖಂಡರುಗಳಾದ ಪ್ರವೀಣ್ ಆನಂದ ಮಂಜುನಾಥ್ ಸಂಜು ಗೌಡ ಪರಮೇಶ್ ಸತೀಶ್ ಗೌಡ ದೀಪು ಕಿಟ್ಟಪ್ಪ ಅರುಣ್ ಗೌಡ ಸೇರಿದಂತೆ ನೂರಾರು ಮುಖಂಡರು ಇದ್ದರು
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: