ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯ ಕಾರ್ಯತಂತ್ರ ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಹೋರಾಟ ಕುರಿತು ರೂಪುರೇಷೆ ಸಿದ್ಧಪಡಿಸಲು ಕಾಂಗ್ರೆಸ್ ನ ಎರಡು ದಿನಗಳ ಕಾಲ ಚಿಂತನ -ಮಂಥನ ಶಿಬಿರ ಇಂದು ಬೆಂಗಳೂರು ಹೊರವಲಯದ ರೆಸಾರ್ಟ್ ನಲ್ಲಿ ಆರಂಭವಾಗಿದೆ.
ಆದರೆ ಈ ನವ ಸಂಕಲ್ಪ ಶಿಬಿರಕ್ಕೆ ಹಿರಿಯ ನಾಯಕರುಗಳಾ ಎಸ್. ಆರ್. ಪಾಟೀಲ್, ಮುದ್ದಹನುಮೇಗೌಡ, ಬಿ.ಎಲ್.ಶಂಕರ್, ಎಂ.ಆರ್.ಸೀತಾರಾಂ ಜಮೀರ್ ಅಹಮದ್ ಖಾನ್ ಗೈರಾಗಿದ್ದಾರೆ. ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿನ ಅಸಮಾಧಾನ ಇದಕ್ಕೆ ಕಾರಣವಾಗಿದೆ.
ಎರಡನೇ ಬಾರಿಯೂ ವಿಧಾನ ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ಮುನಿಸಿಕೊಂಡಿರುವ ಕಾಂಗ್ರೆಸ್ ನ ಹಿರಿಯ ನಾಯಕ ಎಸ್.ಆರ್.ಪಾಟೀಲ್ ಶಿಬಿರಕ್ಕೆ ಗೈರು ಹಾಜರಾಗಿದ್ದಾರೆ. ಟಿಕೆಟ್ ಸಿಗದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಅಸಮಾಧಾನ ಹೊರಹಾಕಿರುವ ಎಂ.ಆರ್.ಸೀತಾರಾಂ, ರಾಜ್ಯಸಭೆ- ಪರಿಷತ್ ಎರಡೂ ಕಡೆ ಪರಿಗಣಿಸದಿರುವುದಕ್ಕೆ ಮುದ್ದಹನುಮೇಗೌಡ ಬೇಸರ ಹೊಂದಿದ್ದಾರೆ.
ಪಕ್ಷದ ಬೆಳವಣಿಗೆಗಳ ಬಗ್ಗೆ ಅಸಮಾಧಾನ ಹೊಂದಿರುವ ಜಮೀರ್ ಅಹಮದ್ ಖಾನ್ ಕೂಡಾ ಪಕ್ಷದ ಚಿಂತನ ಮಂಥನ ಶಿಬಿರಕ್ಕೆ ಗೈರಾಗಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada