ಅಸ್ಸಾ0 ಭೀಕರ ಪ್ರವಾಹದಲ್ಲಿ ೧೦೦ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಅಪಾರ ಮೌಲ್ಯದ ಆಸ್ತಿ ಪಾಸ್ತಿ ಉಂಟಾಗಿದ್ದು, ಅಗತ್ಯ ಬಿದ್ದರೆ ಭಾರತ ಸರ್ಕಾರಕ್ಕೆ ನೆರವು ನೀಡಲು ಸಿದ್ಧವಿರುವುದಾಗಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ವಕ್ತಾರರೊಬ್ಬರು ತಿಳಿಸಿದ್ದಾರೆ. ಅಸ್ಸಾಂನಲ್ಲಿ ಭೀಕರ ಪ್ರವಾಹದಿಂದಾಗಿ ಸುಮಾರು ೪ ಮಿಲಿಯನ್ ನಷ್ಟು ಜನರು ಸ್ಥಳಾಂತರವಾಗಿರುವ ಬಗ್ಗೆ ಸಹೋದ್ಯೋಗಿಗಳು ತಿಳಿಸಿದ್ದು, ಅಗತ್ಯವಿದ್ದರೆ ಭಾರತ ಸರ್ಕಾರಕ್ಕೆ ನೆರವು ನೀಡುವಾದಿಗ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ವಕ್ತಾರ ಡುಜಾರಿಕ್ ಹೇಳಿದ್ದಾರೆ.ಅಸ್ಸಾಂನ ೨೪ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿದ್ದು, ಸುಮಾರು ೨೪. ೩ ಲಕ್ಷ ಜನರ ಮೇಲೆ ತೀವ್ರ ರೀತಿಯ ಪರಿಣಾಮ ಉಂಟಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಭೂಕುಸಿತದಿಂದ ೨೬ ಹಾಗೂ ಪ್ರವಾಹ ಸಂಬ0ಧಿತ ಹಾನಿಯಿಂದಾಗಿ ೮೫ ಜನರು ಮೃತಪಟ್ಟಿರುವುದಾಗಿ ಮಾಹಿತಿ ನೀಡಿದೆ.
ಅಸ್ಸಾಂನಲ್ಲಿ ಭೀಕರ ಪ್ರವಾಹ
Please follow and like us: