ರಾಜ್ಯದಲ್ಲಿ ಕೋವಿಡ್ -19 ಲಾಕ್ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲು ಕರ್ನಾಟಕ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಐಟಿ-ಬಿಟಿ ಕಂಪನಿ ತೆರೆಯಲಿದೆ ಎಂದು ಹೇಳಲಾಗಿತ್ತು. ಆದರೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಐಟಿ-ಬಿಟಿ ಕಂಪನಿ ಪುನಾರಂಭಕ್ಕೆ ಅನುಮತಿ ನೀಡಬಾರದೆಂದು ತೀರ್ಮಾನಿಸಲಾಗಿದೆ. ಅಲ್ಲದೆ ಮೇ 3ರ ತನಕ ಲಾಕ್ಡೌನ್ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಹಾಗಾಗಿ ಯಾವುದೇ ರಿಯಾಯಿತಿ ಇರುವುದಿಲ್ಲ. ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಲಾಕ್ ಡೌನ್ ಜಾರಿಗೆ ತರಲು ಸಂಪುಟ ಸಭೆ ತೀರ್ಮಾನಿಸಿದ್ದು ನಾಳೆಯಿಂದ ಇನ್ನಷ್ಟು ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ. ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಂದ ನಂತರವಷ್ಟೇ ಲಾಕ್ ಡೌನ್ ಸಡಿಲಿಕೆ ಸಂಬಂಧ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಹೇಳಿದರು.
ವರದಿ:ಪೊಲಿಟಿಕಲ್ ಬ್ಯೂರೋ ಸ್ಪೀಡ್ ನ್ಯೂಸ್ ಕನ್ನಡ