ಕೊರೋನಾ ವೈರಸ್ನಿಂದ ಗುಜರಾತ್ನ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಖ್ ಮೃತಪಟ್ಟಿದ್ದಾರೆ. ದೇಶಾದ್ಯಂತ ಲಾಕ್ಡೌನ್ ಘೋಷಿಸಿರುವುದರಿಂದ ಅನೇಕರಿಗೆ ಆಹಾರಇಲ್ಲದೆ ಪರದಾಡುತ್ತಿದ್ದಾರೆ. ಅಂಥವರಿಗೆ ಆಹಾರ ವಿತರಿಸಲು ಹೋಗಿದ್ದ ಬದ್ರುದ್ದೀನ್ ಶೇಖ್ ರಲ್ಲಿ ಕೊರೋನಾ ಲಕ್ಷಣಗಳು ಕಂಡುಬಂದಿತ್ತು. ಬಡವರಿಗೆ ಆಹಾರ ವಿತರಿಸುವಾಗಲೇ ಯಾರಿಂದಲೋ ಬದ್ರುದ್ದೀನ್ ಶೇಖ್ಗೆ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆ ಗುಜರಾತ್ನ ಅಹಮದಾಬಾದ್ನಲ್ಲಿರುವ ಎಸ್ವಿಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾಗೆ ಬಲಿಯಾದ ಮೊದಲ ರಾಜಕಾರಣಿ ಬದ್ರುದ್ದೀನ್ ಶೇಖ್ ಆಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಶಕ್ತಿ ಸಿನ್ಹಾ ಗೋಹಿಲ್ ಖಚಿತಪಡಿಸಿದ್ದಾರೆ.