ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾನೂನು ಬಾಹಿರವಾಗಿ ಬೋಧನಾ ಶುಲ್ಕ ಹೆಚ್ಚಿಸಿರುವುದಕ್ಕೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ರಾಜ್ಯ ರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ,” ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾನೂನು ಬಾಹಿರವಾಗಿ ಬೋಧನಾ ಶುಲ್ಕವನ್ನು ಹೆಚ್ಚಿಸಿ, ವಿದ್ಯರ್ಥಿಗಳಿಂದ ಹಣ ವಸೂಲು ಮಾಡುತ್ತಿರುವ ದೂರುಗಳು ಬರುತ್ತಿವೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಕ್ಷಣ ಗಮನಹರಿಸಿ ಶಿಕ್ಷಣ ಸಂಸ್ಥೆಗಳ ಲೂಟಿಯನ್ನು ನಿಲ್ಲಿಸಿ ಕ್ರಮಕೈಗೊಳ್ಳಬೇಕು,” ಎಂದು ಒತ್ತಾಯಿಸಿದ್ದಾರೆ. ಸದ್ಯ ಕೊರೊನಾ ವೈರಸ್ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ತಮ್ಮ ವಿದ್ಯರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ಆಯೋಜಿಸಿವೆ ಹಾಗೂ ಇದಕ್ಕೂ ಶುಲ್ಕ ವಿಧಿಸುತ್ತಿವೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳ ಲೂಟಿಗೆ ಕಡಿವಾಣ/ ರಾಜ್ಯ ಸರ್ಕಾರಕ್ಕೆ ಸಿದ್ದು ಆಗ್ರಹ
Please follow and like us: