ಮೈಸೂರು : ಎನ್.ಆರ್.ಠಾಣಾ ವ್ಯಾಪ್ತಿಯ ಆಲೀಂನಗರದಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲೀಂನಗರದಲ್ಲಿ ಆಶಾಕಾರ್ಯಕರ್ತೆ ಸುಮಯಾ ಫಿರ್ದೋಸಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಧಮ್ಕಿ ಹಾಕಿ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುಬೇಕು. ಧಮ್ಕಿ ಹಾಕಿದವರನ್ನು ಬಂಧಿಸಿ ಜೈಲಿಗೆ ಕಳುಹಿಸುತ್ತೇವೆ. ಸುಗ್ರೀವಾಜ್ಞೆ ಜಾರಿಯಾದ ಬಳಿಕ ಆರೋಪಿಗಳಿಗೆ ಶಿಕ್ಷೆ ನಿರ್ಧಾರವಾಗುತ್ತದೆ.