ರಾಜ್ಯ ಸರ್ಕಾರ ಲಾಕ್ಡೌನ್ ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಿದ್ದು ಸ್ವಾಗತಾರ್ಹವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಕೆ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೆಲವು ಷರತ್ತುಗಳನ್ನು ವಿಧಿಸಿದ್ದರೆ ಇವುಗಳಲ್ಲಿ ಕೆಲವು ಷರತ್ತುಗಳನ್ನು ಸಡಿಲಿಕೆ ಮಾಡಿದ್ದು, ಇದರಿಂದ ಕೃಷಿ ಹಾಗೂ ಕೈಗಾರಿಕೋದ್ಯಮಕ್ಕೆ ಸಹಾಯಕವಾಗಲಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಕಾಮಗಾರಿಗೆ ಅವಕಾಶ ನೀಡಬೇಕು. ಇಲ್ಲಿ ಕಾರ್ಯನಿರ್ವಹಿಸುವ ನೆರೆ ಜಿಲ್ಲೆಯ ಹಾಗೂ ರಾಜ್ಯದ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಕಾಮಗಾರಿಗಳನ್ನು ನಿರ್ವಹಿಸಬಹುದು. ರೈತರು ಉತ್ಪಾದನೆ ಮಾಡಿದ ಬೆಳೆಗಳಿಗೆ ಒಳ್ಳೆಯ ಬೆಲೆ ಸಿಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು ಬೆಳೆ ನಷ್ಟ ಸಂಭವಿಸಿರುವ ರೈತರಿಗೆ ಕೂಡಲೇ ಪರಿಹಾರ ವಿತರಣೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಬೇಕು, ಆಶಾ ಕಾರ್ಯಕರ್ತರಿಗೆ ಗೌರವಧನ ಹೆಚ್ಚಿಸಿ ಸಹಾಯ ಮಾಡಬೇಕು . ಸರ್ಕಾರ ಬರಪೀಡಿತ ತಾಲೂಕುಗಳಲ್ಲಿ ನೀರಿನ ಸೌಲಭ್ಯ ಹಣ ಬಿಡುಗಡೆ ಮಾಡಬೇಕು ಎಂದು ಹೇಳಿದರು.
ಬೆಳೆ ನಷ್ಟ ಸಂಭವಿಸಿರುವ ರೈತರಿಗೆ ಕೂಡಲೇ ಪರಿಹಾರ ವಿತರಣೆ ಕ್ರಮ
Please follow and like us: