ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಆಹಾರ ಸೇವಿಸಿದ 43 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಖಾರ್ಗೋನ್: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಆಹಾರ ಸೇವಿಸಿದ 43 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಶನಿವಾರ ರಾತ್ರಿ ಖಾರ್ಗೋನ್ನ ನ್ಯೂ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಿವಾಹ ಕಾರ್ಯಕ್ರಮ ನಡೆಯಿತು. ಅಲ್ಲಿ ಹಣ್ಣಿನ ಕಸ್ಟರ್ಡ್ಸ್ ಸೇವಿಸಿದ ಬಳಿಕ 43 ಮಂದಿಗೆ ವಿಷಾಹಾರ ಸೇವನೆಯಿಂದಾಗಿ ವಾಂತಿಭೇದಿ ಉಂಟಾಗಿದೆ. ರೋಗಿಗಳಿಗೆ ಔಷಧಿ ನೀಡಲಾಗಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಆಸ್ಪತ್ರೆಯ ಡಾ.ಬಿ.ಎಂ. ಚೌಹಾಣ್ ತಿಳಿಸಿದ್ದಾರೆ.
ಪ್ರಾಥಮಿಕ ಚಿಕಿತ್ಸೆ ಬಳಿಕ ಬಹುತೇಕರನ್ನು ಬಿಡುಗಡೆ ಮಾಡಲಾಗಿದೆ ಎಂದರು. ಕಸ್ಟರ್ಡ್ಸ್ ಸೇವಿಸಿದ ಬಳಿಕ ವಾಂತಿಭೇದಿ ಕಾಣಿಸಿಕೊಂಡು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಔಷಧಗಳನ್ನು ನೀಡಿದ ಬಳಿಕ ಚೇತರಿಕೆ ಕಂಡರು ಎಂದು ರೋಗಿಯೊಬ್ಬರ ಸಂಬಂಧಿ ಮೋಹನ್ ಲಾಲ್ ಪಾಟಿದಾರ್ ತಿಳಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Sun Feb 26 , 2023
ನಾಗಮಂಗಲ, ಫೆಬ್ರವರಿ, 26: ಪರಶಿವನ ತಪೋಭೂಮಿ, ದೇವಾನು ದೇವತೆಗಳು ನೆಲೆಸಿರುವ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರವಾದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. ಫೆಬ್ರವರಿ 28ರಿಂದ ಮಾರ್ಚ್ 8ರ ವರೆಗೆ ಒಂಬತ್ತು ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿವಿಧ ಪೂಜಾ ಕೈಂಕರ್ಯ ಸೇರಿದಂತೆ ಹಲವು ಧಾರ್ಮಿಕ, ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಫೆಬ್ರವರಿ 28ರ ಬೆಳಗ್ಗೆ 6ಗಂಟೆಗೆ ಶ್ರೀ ಗಂಗಾಧರೇಶ್ವರ ಸ್ವಾಮಿ […]