ಪಾದರಾಯನಪುರ ಗಲಾಟೆಯ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ಟ್ವೀಟ್ ಮುಖಾಂತರ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ. ರಾಜ್ಯವೆಂದರೇ ಕೇವಲ ರಾಮನಗರ ಜಿಲ್ಲೆ ಮಾತ್ರವೇ ಎಂದು ವಿಪಕ್ಷ ನಾಯಕರಿಗೆ ಸಚಿವ ಡಾ.ಕೆ.ಸುಧಾಕರ್ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇರಳದ ಕಾಸರಗೋಡಿನಿಂದ ಮಂಗಳೂರಿಗೆ ಜನ ಬರಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ವಿರೋಧವಿಲ್ಲ. ಇದಕ್ಕಾಗಿ ಪ್ರಧಾನಿಗೆ ಪತ್ರವನ್ನು ಅವರು ಬರೆದಿದ್ದರು ಎಂದು ದೇವೇಗೌಡರು ಈ ಹಿಂದೆ ಮಾಡಿದ್ದ ಟ್ವೀಟ್ನ ಸ್ಕ್ರೀನ್ಶಾಟ್ ಹಾಗೂ ಪ್ರಧಾನಿಗೆ ಬರೆದ ಪತ್ರಗಳನ್ನು ಹಾಕಿದ್ದಾರೆ. ಕೇರಳದ ಕಾಸರಗೋಡಿನಿಂದ ಮಂಗಳೂರಿಗೆ ಜನ ಬರೋದಕ್ಕೆ ಮಾಜಿ ಪ್ರಧಾನಿಗಳಿಗೆ ವಿರೋದವಿಲ್ಲ. ಇದಕ್ಕೆ ಪ್ರಧಾನಿಯವರಿಗೆ ಪತ್ರ ಬರೆದವರು, ಇಂದು ಪಾದರಾಯನಪುರದ ಬಾಂಧವರು ರಾಮನಗರಕ್ಕೆ ಬರಬೇಡಿ ಎಂದು ಹೇಳುವುದು ಎಷ್ಟು ಸರಿ? ರಾಜ್ಯ ಅಂದರೆ ಕೇವಲ ರಾಮನಗರ ಜಿಲ್ಲೆಯೇ? ಎಂದು ಪ್ರಶ್ನೆ ಮಾಡಿದರು
ರಾಜ್ಯ ಅಂದ್ರೆ ಬರೀ ರಾಮನಗರ ಜಿಲ್ಲೆನಾ..?
Please follow and like us: