ಪದೇ ಪದೇ ಕಾಡುವ ಶೀತ, ಕೆಮ್ಮು ನಿಮ್ಮಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾದುದನ್ನು ತೋರಿಸುತ್ತದೆ. ಇದಕ್ಕಾಗಿ ಪ್ರತಿ ಬಾರಿ ಔಷಧದ ಮೊರೆ ಹೋಗಬೇಕಿಲ್ಲ. ಮನೆಯಲ್ಲಿ ಸಿಗುವ ವಸ್ತುಗಳಿಂದ ನಿಮ್ಮ ಅರೋಗ್ಯ ಉತ್ತಮಗೊಳಿಸಬಹುದು.
ಬೆಳಿಗ್ಗೆ ಎದ್ದಾಕ್ಷಣ ಬಿಸಿನೀರಿಗೆ ಕಾಳುಮೆಣಸಿನ ಪುಡಿ ಸೇರಿಸಿ ಕುಡಿಯುವುದರಿಂದ ಶೀತ ಕೆಮ್ಮುವಿನ ಸಮಸ್ಯೆ ದೂರವಾಗುತ್ತದೆ.
ಅದರೊಂದಿಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ದೇಹದಲ್ಲಿ ಸಂಗ್ರಹಗೊಳ್ಳುವ ಎಲ್ಲಾ ರೀತಿಯ ಕಲ್ಮಶ ಮತ್ತು ರಾಸಾಯನಿಕಗಳನ್ನು ಹೊರಹಾಕುತ್ತದೆ. ಹೊಟ್ಟೆಯ ಅಂದರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ದೂರವಾಗಿಸುತ್ತದೆ.
ದೇಹ ತೂಕ ನಿವಾರಣೆಗೂ ಸಹಕರಿಸುವ ಇದು ದೇಹ ನಿರ್ಜಲೀಕರಣಗೊಳ್ಳುವುದನ್ನು ತಡೆಯುತ್ತದೆ. ಮಲಬದ್ಧತೆ ಸಮಸ್ಯೆಯನ್ನು ಪರಿಹರಿಸಿ ದೇಹಕ್ಕೆ ಚೈತನ್ಯ ನೀಡುತ್ತದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada