ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಶ್ರೀ ಪಿ.ಎಂ.ರಘುನಾಥ್ ರವರನ್ನು ಕರ್ನಾಟಕ ವಿಧಾನಪರಿಷತ್ ಗೆ ನಾಮ ನಿರ್ದೇಶನ ಸದಸ್ಯರಾಗಿ ಆಯ್ಕೆ ಮಾಡಬೇಕು ಎಂದು ಅಖಿಲ ಕರ್ನಾಟಕ ಗಾಣಿಗ ಮಹಾಸಭಾ(ರಿ) ಮತ್ತು ಅಖಿಲ ಕರ್ನಾಟಕ ಗಾಣಿಗರ ಒಕ್ಕೂಟ (ರಿ) ಒತ್ತಾಯಿಸುತ್ತದೆ. ಆರ್.ಎಸ್.ಎಸ್. ಸಂಘ ಪರಿವಾರದಲ್ಲಿ ಸಕ್ರಿಯರಾಗಿರುವ ಶ್ರೀ ಪಿ.ಎಂ.ರಘುನಾಥ್ ರವರು ಕೋಲಾರ ಜಿಲ್ಲೆಯಲ್ಲಿ ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ಶುದ್ಧ ಹಸ್ತರು, ಶಿಸ್ತಿನ ಸಿಪಾಯಿ ಆಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನಲ್ಲಿಯೂ ಸಹ ಸಕ್ರಿಯರಾಗಿ ಕಾರ್ಯನಿರ್ವಹಿಸಿದ್ದಾರೆ. “ಕಾಶ್ಮೀರ ಚಲೋ” “ಏಕತಾ ಯಾತ್ರಾ” “ಅಯೋಧ್ಯೆ ರಾಮ ಮಂದಿರ ಚಲೋ” ಇನ್ನೂ ಮುಂತಾದ ಪಕ್ಷದ ಹೋರಾಟಗಳಲ್ಲಿ ಭಾಗವಹಿಸಿದ್ದಾರೆ. ಅಖಿಲ ಭಾರತೀಯ ಗಾಣಿಗರ ಮಹಾಸಭಾದ ರಾಷ್ಟ್ರೀಯ ಘಟಕದ ಅಧ್ಯಕ್ಷರಾಗಿರುವ ಶ್ರೀ ಪಿ.ಎಂ.ರಘುನಾಥ್ ರವರು ಹಿಂದುಳಿದ ವರ್ಗಗಳ ಧೀಮಂತ ನಾಯಕರು, ನೊಂದವರ ಧ್ವನಿ ಆಗಬೇಕು, ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ದುಡಿಯುವ ಪ್ರಾಮಾಣಿಕ ವ್ಯಕ್ತಿಯಾದ ಇವರನ್ನು ಈ ಬಾರಿ ಕರ್ನಾಟಕ ವಿಧಾನಪರಿಷತ್ಗೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಸಮಸ್ತ ಗಾಣಿಗ ಸಮುದಾಯವು ಮಾನ್ಯ ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತದೆ.
ಶ್ರೀ ಪಿ.ಎಂ.ರಘುನಾಥ್ರನ್ನು ವಿಧಾನಪರಿಷತ್ಗೆ ನೇಮಕ ಮಾಡುವ ಬಗ್ಗೆ ಒತ್ತಾಯ
Please follow and like us: